ಕೌಟುಂಬಿಕ ಕಲಹ : ಮಗು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ – vishwanews24
ಕೌಟುಂಬಿಕ ಕಲಹ : ಮಗು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಹಣಕಾಸು, ಕೌಟುಂಬಿಕ ವಿಷಯಕ್ಕೆ ಪದೇ ಪದೇ ಪತಿ ಜಗಳ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಬೇಸತ್ತ ಪತ್ನಿಯೊಬ್ಬಳು ಮಗು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ತಿಗಳರಪಾಳ್ಯದ ಬಾಲಾಜಿನಗರದಲ್ಲಿ ಮಂಗಳವಾರ ನಡೆದಿದೆ.
ತಿಗಳರಪಾಳ್ಯದ ಒಂದು ವರ್ಷ ಎಂಟು ತಿಂಗಳ ಪುತ್ರಿ ಚಾರ್ವಿ ಮೃತ ದುರ್ದೈವಿ. ವಿಷ ಸೇವಿಸಿದ್ದ ಚಂದ್ರಿಕಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಮನೆಯಲ್ಲಿ ಪತಿ ಕೆಲಸಕ್ಕೆ ತೆರಳಿದ ಬಳಿಕ ಮಗುವಿಗೆ ಕೀಟನಾಶಕ ಬೆರೆಸಿದ ಚಹಾ ಕುಡಿಸಿ ಬಳಿಕ ತಾನೂ ಸಹ ಸೇವಿಸಿದ್ದಾಳೆ. ನಂತರ ತನ್ನ ಗಂಡನಿಗೆ ಆತ್ಮಹತ್ಯೆ ವಿಷಯವನ್ನು ಚಂದ್ರಿಕಾ ತಿಳಿಸಿದ್ದಾಳೆ.
ಸೆ. 9ರಂದು ಉಪ ರಾಷ್ಟ್ರಪತಿ ಚುನಾವಣೆ : ನಾಮಪತ್ರ ಸಲ್ಲಿಕೆಗೆ ಆ. 21 ಕೊನೆಯ ದಿನ – vishwanews24
ತಕ್ಷಣ ಆತಂಕದಿಂದ ಮನೆಗೆ ಧಾವಿಸಿದ ಮಹಿಳೆಯ ಪತಿ, ವಿಷ ಸೇವಿಸಿದ್ದ ಪತ್ನಿ ಹಾಗೂ ಮಗುವನ್ನು ಮಲ್ಲೇಶ್ವರ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಗುವನ್ನು ವಾಣಿ ವಿಲಾಸ ಆಸ್ಪತ್ರೆಗೆ ಹಾಗೂ ಚಂದ್ರಿಕಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಿದರು. ಆದರೆ, ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ. ಚಂದ್ರಿಕಾ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
