ಗರ್ಭಿಣಿ ಆನೆ ಕೊಂದ ಪ್ರಕರಣ : ಒಂದೂವರೆ ವರ್ಷಗಳ ಬಳಿಕ ಪೊಲೀಸರಿಗೆ ಶರಣಾದ ಆರೋಪಿ – Vishwanews24

Featured, ರಾಷ್ಟ್ರ ನ್ಯೂಸ್

ಗರ್ಭಿಣಿ ಆನೆ ಕೊಂದ ಪ್ರಕರಣ : ಒಂದೂವರೆ ವರ್ಷಗಳ ಬಳಿಕ ಪೊಲೀಸರಿಗೆ ಶರಣಾದ ಆರೋಪಿ – Vishwanews24

ತಿರುವನಂತಪುರಂ: ಅನಾನಾಸಿನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣದಲ್ಲಿ ಘಟನೆಯ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆನೆ ಹತ್ಯೆಯಾದ ಒಂದೂವರೆ ವರ್ಷಗಳ ಬಳಿಕ ಎರಡನೇ ಆರೋಪಿ ರಿಯಾಜುದ್ದೀನ್​ (38) ಪೊಲೀಸರಿಗೆ ಬಂದು ಶರಣಾಗಿದ್ದಾನೆ.

ಕಾಡು ಹಂದಿಯನ್ನು ಕೊಲ್ಲಲು ರೂಪಿಸಿದ ಬಲೆಗೆ ಆನೆ ಸಿಲುಕಿ ಮೃತಪಟ್ಟಿದ್ದು, ಕೊನೆಗೂ ಘಟನೆಯ ಪಶ್ಚಾತಾಪದಿಂದ ಆರೋಪಿ ಕೇರಳದ ಮುನ್ಸಿಫ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ ಮುಂದೆ ಅ.16ರಂದು ಶರಣಾಗಿದ್ದಾನೆ. ಈತ 2020 ಜೂನ್​ ತಿಂಗಳಿನಿಂದ ನಾಪತ್ತೆಯಾಗಿದ್ದ. ಸುಮಾರು ಒಂದೂವರೆ ವರ್ಷದ ಬಳಿಕ ಕೋರ್ಟ್​ಗೆ ಶರಣಾಗಿದ್ದಾನೆ.

ಇನ್ನು ರಿಯಾಜುದ್ದೀನ್​ ತಂದೆ ಅಬ್ದುಲ್​ ಕರೀಮ್​ ಪ್ರಕರಣದ ಮೊದಲ ಆರೋಪಿಯಾಗಿದ್ದು, ಈಗಲೇ ನಾಪತ್ತೆಯಾಗಿದ್ದಾರೆ. ಆರೋಪಿ ರಿಯಾಜುದ್ದೀನ್​ನನ್ನು ಅರಣ್ಯ ಇಲಾಖೆ ತಮ್ಮ ಕಸ್ಟಡಿಗೆ ತೆಗೆದುಕೊಂಡಿದೆ.

ಗರ್ಭಿಣಿ ಆನೆಯು ಹಸಿವಿನಿಂದ ಸ್ಫೋಟಕ ತುಂಬಿದ ಅನಾನಾಸು​ ತಿನ್ನಲು ಯತ್ನಿಸಿದಾಗ, ಸ್ಫೋಟಕ ಬಾಯಲ್ಲೇ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ಆನೆ ಕೆಲ ದಿನಗಳವರೆಗೆ ನರಳಿ ಮೃತಪಟ್ಟಿತ್ತು. ಬಳಿಕ ಅದರ ಅಂತಿಮ ಸಂಸ್ಕಾರವನ್ನು ಅರಣ್ಯ ಇಲಾಖೆ ನೆರವೇರಿಸಿತ್ತು.

ಕೇಸರಿ ಬಗ್ಗೆ ನಿಮಗೆ ಜಿಗುಪ್ಸೆ ಏಕೆ? ಅದನ್ನ ಕಂಡರೆ ಯಾಕೆ ವಿಚಲಿತರಾಗುತ್ತೀರಿ? ಗೊಂದಲಕ್ಕೆ ಒಳಗಾಗುತ್ತೀರಿ? : ಸಿದ್ದರಾಮಯ್ಯ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ – Vishwanews24