ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

Featured, ರಾಜ್ಯ ನ್ಯೂಸ್

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ

ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ ಆಗಲ್ಲ..

ಗುಟ್ಕಾಗೆ ನಮ್ಮ ದೇಶದ ಅಡಿಕೆ ಬಳಕೆ ಮಾಡಲ್ಲ ಅಂತ ಆರೋಗ್ಯ ಸಚಿವರ ಸ್ಪಷ್ಟನೆ

ಬೆಂಗಳೂರು: ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶವನ್ನು ನಾವು ವಾಪಸ್ ಪಡೆದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಸ್ಪಷ್ಟನೆ ನೀಡಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಾನ್ ಮಸಾಲದಲ್ಲಿ ನಿಕೊಟಿನ್ ನಿಷೇಧ ಆದೇಶದಿಂದ ಅಡಿಕೆ ಬೆಳೆಗಾರರಿಗೆ ಏನೂ ಸಮಸ್ಯೆ ಆಗುವುದಿಲ್ಲ. ನಾನು ಆ ಆದೇಶವನ್ನು ವಾಪಸ್ ಪಡೆದಿಲ್ಲ. ಪಾನ್ ಮಸಾಲದಲ್ಲಿ ನಿಕೊಟಿನ್ ಇರಬಾರದು ಎಂಬ ಆದೇಶ ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾಡಲಾಗಿದೆ. ಇದರಿಂದಾಗಿ ಅಡಿಕೆಗೆ ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದರು.

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

ನಮ್ಮ ಇಲಾಖೆ, ಸರ್ಕಾರ ಅಡಿಕೆ ಬೆಳೆಗಾರರಿಗೆ, ರೈತರಿಗೆ, ವ್ಯಾಪಾರಿಗಳಿಗೆ ಸಂಪೂರ್ಣ ಬೆಂಬಲ, ಪ್ರೋತ್ಸಾಹ ನೀಡುತ್ತದೆ. ಅಡಿಕೆ ಬೆಳೆಗಾರರಿಗೆ ತೊಂದರೆ ಕೊಡುವ ಕೆಲಸ ಹಿಂದೆಯೂ ಮಾಡಿಲ್ಲ, ಈಗಲೂ ಮಾಡಲ್ಲ, ಮುಂದೆನೂ ಮಾಡುವುದಿಲ್ಲ. ಅಡಿಕೆ ಬೆಳೆಗಾರರಿಗೆ ಹಾಗೂ ವ್ಯಾಪಾರಿಗಳಿಗೆ ಈ ತೀರ್ಮಾನದಿಂದ ಬೆಲೆ ಹೆಚ್ಚಾಗುತ್ತದೆ ಎಂದು ತಿಳಿಸಿದರು.

ಗುಟ್ಕಾಗೆ ನಮ್ಮ ದೇಶದ ಅಡಿಕೆಯನ್ನು ಯಾರೂ ಬಳಕೆ ಮಾಡುವುದಿಲ್ಲ. ನೇಪಾಳ, ಬಾಂಗ್ಲಾದಿಂದ ಆಮದು ಮಾಡಿ ಬಳಕೆ ಮಾಡುತ್ತಾರೆ. ಗುಟ್ಕಾ ನಿಕೊಟಿನ್ ನಿಷೇಧದಿಂದ ಬೆಲೆ ಹೆಚ್ಚಾಗುವ ಸಾಧ್ಯತೆನೇ ಹೆಚ್ಚಿದೆ. ಆವತ್ತು ನಾನು ಗುಟ್ಕಾ ನಿಷೇಧ ಮಾಡುವಾಗ ಇದೇ ವಿಚಾರ ಮುನ್ನಲೆಗೆ ಬಂದಿತ್ತು. ಆಗ ನಾನು ಬಲವಾಗಿ ಅದನ್ನು ಸಮರ್ಥಿಸಿಕೊಂಡಿದ್ದೆ. ಸಿಎಂ ಕೂಡ ಸಮರ್ಥಿಸಿದ್ದರು. ಅಡಿಕೆ ಬೆಲೆ ಕುಸಿತ ಆಗುವುದಿಲ್ಲ ಎಂದಿದ್ದೆವು. ಮೂರು ತಿಂಗಳು ಆದ ಬಳಿಕ ಅಡಿಕೆ ಬೆಲೆ ಹೆಚ್ಚಾಗಿತ್ತು. ಆದ ಕಾರಣ ಪಾನ್ ಮಸಾಲದಲ್ಲಿ ನಿಕೊಟಿನ್ ಇರಬಾರದು ಎಂಬ ತೀರ್ಮಾನದಿಂದ ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆ ಇಲ್ಲ. ಅಡಿಕೆ ವ್ಯಾಪಾರಿಗಳಿಗೂ ಯಾವುದೇ ತೊಂದರೆ ಇಲ್ಲ ಎಂದರು.

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24

Leave a Reply