ಗೂಂಡಾಗಳ ರಕ್ಷಣೆಗೆ ನಮ್ಮ ಸರ್ಕಾರ ಅನುಮತಿ ನೀಡುವುದಿಲ್ಲ..: ಸಚಿವ ಕೆ.ಎಸ್.ಈಶ್ವರಪ್ಪ -Vishwanews24

Featured, ರಾಜ್ಯ ನ್ಯೂಸ್

ಹುಬ್ಬಳ್ಳಿ: ದೇಶದಲ್ಲಿ ಭ್ರಷ್ಟಾಚಾರ, ಗೂಂಡಾಗಳು ಹಾಗೂ ಕೊಲೆಗಡುಕರಿಗೆ ರಕ್ಷಣೆ ಸಿಗುತ್ತೆ ಎಂಬ ನಂಬಿಕೆ ಇತ್ತು. ಆದರೆ, ಈಗ ಕೇಂದ್ರ ಹಾಗೂ ರಾಜ್ಯ ಸರ್ಕಾರ ರಕ್ಷಣೆ ಅನುಮತಿ ನೀಡುವುದಿಲ್ಲ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಹೇಳಿದರು.

ಈ ಸಂಬಂಧ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತ ಯೋಗೀಶ್ ಗೌಡ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರಿಗೆ ಕಠಿಣ ಕ್ರಮ ಜರುಗಿಸಲು ಈಗ ಸಿಬಿಐ ವಹಿಸಲಾಗಿದೆ ಎಂದು ಅವರು ತಿಳಿಸಿದರು.

ಗೂಂಡಾಗಳ ಬೆನ್ನಿಗೆ ನಮ್ಮ ಸರ್ಕಾರ ನಿಲ್ಲುವುದಿಲ್ಲ..

ಸದ್ಯ ನೆರೆ ಹಾವಳಿ ಸಂಬಂಧಿಸಿದಂತೆ ಈಗ ತಾತ್ಕಾಲಿಕವಾಗಿ ಸಮಸ್ಯೆಗಳನ್ನು ಬಗೆಹರಿಸಲು ಹೆಚ್ಚಿನ ಒತ್ತು ಈಗಾಗಲೇ ನೀಡಲಾಗುತ್ತಿದ್ದು ನೆರೆ ಪರಿಹಾರ ಶೇ. 99 ಭಾಗ ವಿತರಣೆಯಾಗಿದೆ, ಈಗ ತಾತ್ಕಾಲಿಕ ಸಮಸ್ಯೆ ನಿವಾರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನಿರಾಶ್ರಿತರಿಗೆ ಶಾಶ್ವತ ಪರಿಹಾರ ಕಲ್ಪಿಸಿ ಕೊಡಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಾತನಾಡಿದ್ದಾರೆ.