ಗೋಮಾಂಸ ಇಷ್ಟ ಹೇಳಿಕೆ : ರಣಬೀರ್–ಆಲಿಯಾ ಉಜ್ಜೈನಿ ಮಹಾಕಾಳೇಶ್ವರ ದೇಗುಲ ಪ್ರವೇಶಿಸದಂತೆ ಬಜರಂಗದಳ ತಡೆ – Vishwanews24

Featured, ರಾಷ್ಟ್ರ ನ್ಯೂಸ್

ಗೋಮಾಂಸ ಇಷ್ಟ ಹೇಳಿಕೆ : ರಣಬೀರ್–ಆಲಿಯಾ ಉಜ್ಜೈನಿ ಮಹಾಕಾಳೇಶ್ವರ ದೇಗುಲ ಪ್ರವೇಶಿಸದಂತೆ ಬಜರಂಗದಳ ತಡೆ

ಉಜ್ಜೈನಿ: ಬಾಲಿವುಡ್‌ನ ತಾರಾ ದಂಪತಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್‌ಗೆ ಮಧ್ಯ ಪ್ರದೇಶದಲ್ಲಿ ದೇಗುಲ ಪ್ರವೇಶ ನಿರಾಕರಿಸಲಾಗಿದೆ.

ಮಧ್ಯ ಪ್ರದೇಶದ ಉಜ್ಜೈನಿಯಲ್ಲಿರುವ ಪ್ರಸಿದ್ಧ ಮಹಾಕಾಲ್ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಲು ರಣಬೀರ್ ಕಪೂರ್ ಮತ್ತು ಆಲಿಯಾ ಭಟ್‌ ನಿರ್ಧರಿಸಿದ್ದರು.

ಆದರೆ, ಬಜರಂಗ ದಳ ಕಾರ್ಯಕರ್ತರು ಈ ಜೋಡಿಗೆ ದೇಗುಲ ಪ್ರವೇಶ ನಿರಾಕರಿಸಿದ್ದಾರೆ. ಅಲ್ಲದೆ, ರಣಬೀರ್ ಮತ್ತು ಆಲಿಯಾ ಸ್ಥಳಕ್ಕೆ ಬರುತ್ತಿದ್ದಂತೆ ‘ಜೈ ಶ್ರೀರಾಮ್‘ ಘೋಷಣೆ ಕೂಗಿದ್ದಾರೆ.

ದ್ವೇಷದ ರಾಜಕಾರಣದಿಂದ ತಂದೆಯನ್ನು ಕಳೆದುಕೊಂಡಿದ್ದೇನೆ.. ಆದರೆ ನನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳುವುದಿಲ್ಲ : ರಾಹುಲ್ ಗಾಂಧಿ – Vishwanews24

ರಣಬೀರ್ ಅವರು ಕೆಲಸಮಯದ ಹಿಂದೆ, ಸಂದರ್ಶನವೊಂದರಲ್ಲಿ ಗೋಮಾಂಸ ತಿನ್ನಲು ಇಷ್ಟ ಎಂದು ಹೇಳಿಕೊಂಡಿದ್ದರು. ಹಿಂದುಗಳ ಭಾವನೆಗೆ ಅವರು ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ದೇಗುಲ ಪ್ರವೇಶ ನಿರಾಕರಿಸಿದ್ದಾರೆ.

ಬಜರಂಗದಳದವರ ವಿರುದ್ಧ ಲಾಠಿ ಚಾರ್ಜ್ ಮಾಡಿದರೂ, ಕಾರ್ಯಕರ್ತರು ಸ್ಥಳದಿಂದ ತೆರಳದೇ ಪ್ರತಿಭಟಿಸಿದ್ದಾರೆ. ಹೀಗಾಗಿ ರಣಬೀರ್ ಮತ್ತು ಆಲಿಯಾಗೆ ದೇಗುಲ ಪ್ರವೇಶ ಸಾಧ್ಯವಾಗಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಮಳೆಯಿಂದ ಮುಳುಗಲು ಪ್ರಕೃತಿ ಕಾರಣವೇ ಹೊರತು ಸರ್ಕಾರ ಅಲ್ಲ : ಬಿಸಿ ಪಾಟೀಲ್ – Vishwanews24

Leave a Reply