ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ, ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ ..:ಕಾಂಗ್ರೆಸ್ ಕಿಡಿ -Vishwanews24
ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ, ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ ..:ಕಾಂಗ್ರೆಸ್ ಕಿಡಿ -Vishwanews24
ಗೋವುಗಳು @BJP4India
ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ!
ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ!●ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ
●ಗೋವಾದ ಬಿಜೆಪಿ ಸರ್ಕಾರ ಗೋಮಾಂಸದ ಕೊರತೆ ನೀಗಿಸಲು ರಾಜ್ಯದಿಂದಾಗುವ ಪೂರೈಕೆಯ ಕಡೆ ಆಸೆಯಿಂದ ನೋಡುತ್ತಿದೆ!
ಇದಕ್ಕೆ @BJP4Karnataka ಅಭಿಪ್ರಾಯ ಮತ್ತು ಉತ್ತರ ಏನು ? pic.twitter.com/w0OnGd0se2
— Karnataka Congress (@INCKarnataka) December 18, 2020
ಬೆಂಗಳೂರು: ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ!. ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಗೋವಾದ ಬಿಜೆಪಿ ಸರ್ಕಾರ ಗೋಮಾಂಸದ ಕೊರತೆ ನೀಗಿಸಲು ರಾಜ್ಯದಿಂದಾಗುವ ಪೂರೈಕೆಯ ಕಡೆ ಆಸೆಯಿಂದ ನೋಡುತ್ತಿದೆ!. ಇದಕ್ಕೆ ಕರ್ನಾಟಕ ಬಿಜೆಪಿಯ ಅಭಿಪ್ರಾಯ ಮತ್ತು ಉತ್ತರ ಏನು ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರಲು ಬಿಜೆಪಿ ಮುಂದಾಗುತ್ತಿದೆ. ಈಗಾಗಲೇ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರಗೊಂಡಿದೆ. ಈ ನಡುವೆ ಗೋವಾದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದ್ದು ಅಲ್ಲಿ ಗೋಹತ್ಯೆಗೆ ನಿಷೇಧ ಇಲ್ಲ. ಜೊತೆಗೆ ಗೋವಾದಲ್ಲಿ ಮಾಂಸದ ಕೊರತೆ ನಿವಾರಿಸಲು ಕರ್ನಾಟಕದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ ಎಂಬ ಹೇಳಿಕೆಯನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.
