ಗ್ಯಾರಂಟಿಯೂ ಕೊಡಬೇಕು ಅಭಿವೃದ್ಧಿಯೂ ಮಾಡಬೇಕು , ಅವಾಗ ಸಿದ್ದರಾಮಯ್ಯನವರಿಗೆ ಶಹಬ್ಬಾಸ್ ಎನ್ನುತ್ತೇವೆ  : ಬಸವರಾಜ್ ಬೊಮ್ಮಾಯಿ – vishwanews24

Featured, ರಾಜ್ಯ ನ್ಯೂಸ್

ಗ್ಯಾರಂಟಿ ಕೊಡುತ್ತೇವೆಂದು ಜನರಿಗೆ ಹೇಳಿ ಅಧಿಕಾರಕ್ಕೆ ಬಂದಿದ್ದೀರಿ, ಗ್ಯಾರಂಟಿ ಕೊಡಿ : ಬಸವರಾಜ್ ಬೊಮ್ಮಾಯಿ

ಹಾವೇರಿ: ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ವಿಫಲವಾಗಿದ್ದಾರೆ ಎಂದು ಹಾವೇರಿಯಲ್ಲಿ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್ ಟಿಯಲ್ಲಿ ಸೋರಿಕೆಯಾಗುತ್ತಿದೆ. ಸಿಎಂ ಯಾಕೆ ಸುಮ್ಮನೆ ಕುಳಿತಿದ್ದಾರೆ. ಪ್ಲ್ಯಾಸ್ಟಿಕ್, ಅಡಿಕೆ, ಸ್ಕ್ರ್ಯಾಪ್ ವ್ಯಾಪಾರದಲ್ಲಿ ಸೋರಿಕೆಯಾಗುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರ ಮೇಲೆ ಹೊರೆ ಹಾಕುವುದಲ್ಲ ಎಂದರು.

ಕಾರವಾರ : ಭಟ್ಕಳದಲ್ಲಿ ಶಂಕಿತ ಉಗ್ರನಿಗಾಗಿ ಮಹಾರಾಷ್ಟ್ರ ಎಟಿಎಸ್ ತಂಡದಿಂದ ಶೋಧ – vishwanews24

ಗ್ಯಾರಂಟಿ ಬಂದ್ ಮಾಡುವಂತೆ ನಾವ್ಯಾಕೆ ಹೇಳಲಿ. ಗ್ಯಾರಂಟಿ ಯೋಜನೆ ಕೊಡಿ ಎಂದು ಹೇಳುತ್ತೇವೆ ನಾವು. ಗ್ಯಾರಂಟಿ ಕೊಡುತ್ತೇವೆಂದು ಜನರಿಗೆ ಹೇಳಿ ಅಧಿಕಾರಕ್ಕೆ ಬಂದಿದ್ದೀರಿ, ಗ್ಯಾರಂಟಿ ಕೊಡಿ. ಗ್ಯಾರಂಟಿಯೂ ಕೊಡಬೇಕು ಅಭಿವೃದ್ಧಿಯೂ ಮಾಡಬೇಕು. ಅವಾಗ ಸಿದ್ದರಾಮಯ್ಯನವರಿಗೆ ಶಹಬ್ಬಾಸ್ ಎನ್ನುತ್ತೇವೆ ಎಂದು ಬೊಮ್ಮಾಯಿ ಹೇಳಿದರು.

ಉಡುಪಿ : ಬಸ್‌ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಮಾಲೀಕರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಚಾಲಕ, ನಿರ್ವಾಹಕ – vishwanews24

Leave a Reply