ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಎಲ್ಲರನ್ನೂ ಪಶ್ಚಿಮ ಬಂಗಾಳದಿಂದ ಓಡಿಸುತ್ತಾರೆ : ಮಮತಾ ಬ್ಯಾನರ್ಜಿ -Vishwanews24
ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಎಲ್ಲರನ್ನೂ ಪಶ್ಚಿಮ ಬಂಗಾಳದಿಂದ ಓಡಿಸುತ್ತಾರೆ : ಮಮತಾ ಬ್ಯಾನರ್ಜಿ -Vishwanews24
ಕೋಲ್ಕತ್ತಾ: ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಎಲ್ಲರನ್ನೂ ಪಶ್ಚಿಮ ಬಂಗಾಳದಿಂದ ಓಡಿಸುತ್ತಾರೆ ಎಂದು ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎರಡನೇ ಸುತ್ತಿನ ಮತದಾನ ಹತ್ತಿರವಾಗುತ್ತಿದ್ದಂತೆ ರಾಜಕೀಯ ರ್ಯಾಲಿಗಳು ಜೋರಾಗಿದ್ದು, ಇಂದು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ 8 ಕಿ.ಮೀ. ವ್ಹೀಲ್ ಚೇರ್ ಮೂಲಕವೇ ಪಾದಯಾತ್ರೆ ನಡೆಸಿದರು. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಬಿಜೆಪಿ ಜಯಗಳಿಸಿದರೆ ಪ್ರತಿಯೊಬ್ಬರನ್ನೂ ಈ ರಾಜ್ಯದಿಂದ ಹೊರಹಾಕಲಿದೆ ಎಂದರು.
ಇದನ್ನೂ ಓದಿ : ಉಡುಪಿ : ಕುಟುಂಬ ಗುರುತಿನ ಚೀಟಿ ತಂತ್ರಾ0ಶದಲ್ಲಿ ಅಂಗವಿಕಲರ ನೋಂದಣಿಗೆ ಸೂಚನೆ -Vishwanews24
Those who can't love culture, can't do politics here. Nandigram witnessing hooliganism. We did meeting in Birulia, TMC office destroyed. He's(Suvendu Adhikari) doing whatever he wants. I can play games too. I too will respond like lion. I'm Royal Bengal tiger: WB CM in Nandigram pic.twitter.com/ugR6n4Hxqo
— ANI (@ANI) March 29, 2021
ಒಂದು ವೇಳೆ ನೀವು ಬಿಜೆಪಿಗೆ ಮತ ಹಾಕಿದರೆ ಅವರು ನಿಮ್ಮನ್ನು ರಾಜ್ಯದಿಂದಲೇ ಓಡಿಸುತ್ತಾರೆ. ಗೂಂಡಾಗಳನ್ನು ಇಟ್ಟುಕೊಂಡರೆ ಅವರು ಎಲ್ಲವನ್ನೂ ಹಿಡಿದಿಟ್ಟುಕೊಳ್ಳುತ್ತಾರೆ. ಬಂಗಾಳದ ಅಸ್ತಿತ್ವವನ್ನು ಸೆರೆಹಿಡಿಯುತ್ತಾರೆ. ಆದರೆ ಟಿಎಂಸಿಗೆ ಮತ ಹಾಕಿದರೆ ನಿಮ್ಮ ಮನೆ ಬಾಗಿಲಿಗೆ ಉಚಿತ ಪಡಿತರ ಬರಲಿದೆ ಎಂದು ಗುಡುಗಿದ್ದಾರೆ.
ಕ್ಷೇತ್ರದಲ್ಲಿ ಗೆದ್ದ ನಂತರ ನಂದಿಗ್ರಾಮದಲ್ಲಿ ಕಚೇರಿ ತೆರೆಯುತ್ತೇನೆ. ಈ ಆಟದಲ್ಲಿ ನಾವು ಗೆಲ್ಲಬೇಕು. ಬಿಜೆಪಿಯವರು ಗೂಂಡಾಗಿರಿ ಮಾಡಲು ಪ್ರಯತ್ನಿಸಿದರೆ ಪಾತ್ರೆ ಹಾಗೂ ಪೊರಕೆಗಳ ಮೂಲಕವೇ ಓಡಿಸಬೇಕು ಎಂದರು.
ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯವರು ಅವರ ಭೂಮಿಯನ್ನು ಕದಿಯುತ್ತಿದ್ದಾರೆ. ಅವರ ಭೂಮಿ, ಪಶ್ಚಿಮ ಬಂಗಾಳ, ಪಶ್ಚಿಮ ಬಂಗಾಳದ ಸಂಸ್ಕøತಿಯನ್ನು ಲೂಟಿ ಮಾಡಲು ಬಿಡಬೇಡಿ. ಅಲ್ಲದೆ ನಮ್ಮ ತಾಯಿ, ಸಹೋದರಿಯರ ಗೌರವವನ್ನು ಹಾಳು ಮಾಡಲು ಬಿಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
