ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ , ಯಾವುದೇ ಗ್ಯಾರಂಟಿ ನಿಲ್ಲಿಸುವುದಿಲ್ಲ : ಡಿಕೆ ಶಿವಕುಮಾರ್ – vishwanews24

Featured, ರಾಜ್ಯ ನ್ಯೂಸ್

ಯಾವುದೇ ಕಾಂಗ್ರೆಸ್ ಶಾಸಕರು, ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು : ಡಿಸಿಎಂ ಎಚ್ಚರಿಕೆ

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಕುರಿತಂತೆ ಶಾಸಕ ಗವಿಯಪ್ಪ, ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಹಾಗಾಗಿ ಯಾವುದಾದರೂ ಎರಡು ಗ್ಯಾರಂಟಿಗಳನ್ನು ನಿಲ್ಲಿಸಬೇಕು ಎಂದು ಅಪಸ್ವರ ಎತ್ತಿರುವ ವಿಚಾರವಾಗಿ, ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಜನರಿಗಾಗಿ ನಾವು ಗ್ಯಾರಂಟಿ ಘೋಷಣೆ ಮಾಡಿದ್ದೇವೆ ಮುಂದುವರಿಸುತ್ತೇವೆ. ಕಾಂಗ್ರೆಸ್ ಶಾಸಕರು ಕಾರ್ಯಕರ್ತರು ಈ ಬಗ್ಗೆ ಮಾತಾಡಬಾರದು. ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ.ಯಾವುದೇ ಗ್ಯಾರಂಟಿ ನಿಲ್ಲಿಸುವುದಿಲ್ಲ. ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡುತ್ತೇವೆ. ಬಿಪಿಎಲ್ ಕಾರ್ಡ್ ರೀತಿ ಪರಿಶೀಲನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಸಂವಿಧಾನವನ್ನು ಒಪ್ಪದ ಉಡುಪಿ ಪೇಜಾವರ ಸ್ವಾಮಿ ದೇಶ ಬಿಟ್ಟು ತೊಲಗಲಿ : ಜಯನ್ ಮಲ್ಪೆ ಆಗ್ರಹ – vishwanews24

Leave a Reply