ಜನಾರ್ಧನ ರೆಡ್ಡಿಗೆ ಬಳ್ಳಾರಿ ಜನರ ಶಾಪ ಎಂದ ಸಿದ್ದು,ಹೀಗೆ ಹೇಳಲು ಕಾರಣ ಇಲ್ಲಿದೆ….!

ಉಡುಪಿ

ಜನಾರ್ಧನ ರೆಡ್ಡಿಗೆ ಬಳ್ಳಾರಿ ಜನರ ಶಾಪ ಎಂದ ಸಿದ್ದು,

ಬೆಂಗಳೂರು: ರಾಜ್ಯದ ಪಂಚ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣಿ ಧನಿ ಗಾಲಿ ಜನಾರ್ಧನ ರೆಡ್ಡಿಗೆ ಮೇಲೆ ಟ್ವೀಟ್ ಮೂಲಕ ತಿವಿದಿದ್ದಾರೆ.
ಬಳ್ಳಾರಿಯಲ್ಲಿ ಕಾಂಗ್ರೇಸ್ ಬೆಂಬಲಿತ ಉಗ್ರಪ್ಪ ಗೆಲುವು ಸಾಧಿಸುತ್ತಿದ್ದಂತೆ ಸಿದ್ದರಾಮಯ್ಯ ಜನಾರ್ಧನ ರೆಡ್ಡಿಯ ಅಮಾನವೀಯ ನಡೆನುಡಿಗೆ ಬಳ್ಳಾರಿ ಜನರೇÀ ಶಾಪ ಎಂದು ಟ್ವೀಟ್ ಮಾಡುವ ಮೂಲಕ ಟಾಂಗ್ ನೀಡಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ರೆಡ್ಡಿ ಸಿದ್ದರಾಮಯ್ಯನ ಪುತ್ರ ರಾಕೇಶ್ ಸಾವಿನ ಬಗ್ಗೆ ಹೀಗೆ ಹೇಳಿ ಟೀಕಿಸಿದ್ದರು.

ನನ್ನ ಮಕ್ಕಳಿಂದ 4 ವರ್ಷ ದೂರ ಇರುವಂತೆ ಸಿದ್ದರಾಮಯ್ಯ ಮಾಡಿದ್ದಾರೆ. ಶ್ರವಣ ಕುಮಾರ ಕೊಂದಾಗ ಪುತ್ರ ಅಗಲಿಕೆ ನೋವು ಗೊತ್ತಾಗಲಿ ಅಂತ ಹೆತ್ತವರು ಶಾಪ ಕೊಟ್ಟಿದ್ರು. ನನ್ನನ್ನು ನನ್ನ ಮಕ್ಕಳಿಂದ ದೂರ ಮಾಡಿದ ಎಲ್ಲರೂ ಅನುಭವಿಸುತ್ತಾರೆ. ಕೆಟ್ಟವರಿಗೆ ಭಗವಂತ ಬುದ್ದಿ ಕಳಿಸ್ತಾನೆ ಅಂತ ರಾಕೇಶ್ ಸಾವನ್ನ ಪ್ರಸ್ತಾಪಸಿ ಟೀಕಿಸಿದ್ದರು.