ಜಾರಕಿಹೊಳಿ ಸಿಡಿ ಪ್ರಕರಣ : ಪೊಲೀಸರಿಗೆ ತನಿಖೆಗೆ ಪೂರ್ಣ ಸ್ವತಂತ್ರ ಕೊಟ್ಟಿದ್ದೇವೆ : ಬಸವರಾಜ ಬೊಮ್ಮಾಯಿ -Vishwanews24

Featured, ರಾಜ್ಯ ನ್ಯೂಸ್

ಜಾರಕಿಹೊಳಿ ಸಿಡಿ ಪ್ರಕರಣ : ಪೊಲೀಸರಿಗೆ ತನಿಖೆಗೆ ಪೂರ್ಣ ಸ್ವತಂತ್ರ ಕೊಟ್ಟಿದ್ದೇವೆ : ಬಸವರಾಜ ಬೊಮ್ಮಾಯಿ -Vishwanews24

ಬೆಂಗಳೂರು: ರಮೇಶ ಜಾರಕಿಹೊಳಿಯವರು ಸಿಡಿ ಹಿಂದೆ ಷಡ್ಯಂತ್ರವಿದೆ ಎಂದು ಪತ್ರ ಬರೆದಿದ್ದರು. ಹೀಗಾಗಿ ಎಸ್ ಐಟಿ ತನಿಗೆಗೆ ಕೊಟ್ಟಿದ್ದೇವೆ. ಆದರೆ ಇಷ್ಟೇ ದಿನದಲ್ಲೆ ತನಿಖೆ ಮುಗಿಸಿ ಎಂದು ಸಮಯ ನಿಗದಿ ಮಾಡಲಾಗುವುದಿಲ್ಲ. ಪೊಲೀಸರಿಗೆ ಪೂರ್ಣ ಸ್ವತಂತ್ರ ಕೊಟ್ಟಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರು: ಮಹಿಳೆ ಮೇಲೆ ಹಲ್ಲೆ ಆರೋಪ, ಜೊಮ್ಯಾಟೋ ಡೆಲಿವರಿ ಬಾಯ್ ಬಂಧನ -Vishwanews24

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆಗೆ ಸತ್ಯ ಗೊತ್ತಾಗಲಿ ಎಂದು ಶೀಘ್ರವಾಗಿ ವರದಿ ಕೊಡಿ ಎಂದು ಹೇಳಿದ್ದೇವೆ. ಎಸ್ ಐ ಟಿಯವರು ಸಂಪೂರ್ಣ ತನಿಖೆ ನಡೆಸುತ್ತಾರೆ. ಕಬ್ಬನ್ ಪಾರ್ಕ್ ನಲ್ಲಿ ದೂರು ನೀಡಿದ್ದು, ವಾಪಸ್ ಪಡೆದಿದ್ದು ಎಲ್ಲವನ್ನೂ ಎಸ್ ಐಟಿ ನೋಡುತ್ತದೆ. ಪತ್ರದ ಮೇಲೆ ಪ್ರಾಥಮಿಕ ತನಿಖೆ ನಡೆಯುತ್ತದೆ, ತನಿಖೆಯಲ್ಲಿನ ಬೆಳವಣಿಗೆ ನೋಡಿ ಅವಶ್ಯಕತೆಯಿದ್ದರೆ ಎಫ್ ಐಆರ್ ದಾಖಲಾಗುತ್ತದೆ ಎಂದರು.

ಇದು ನಕಲಿ ಸಿಡಿ ಆದ ಮೇಲೆ ತನಿಖೆ ಏಕೆ ಎಂಬ ಡಿ ಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು, ನಕಲಿ ಸಿಡಿ ಮಾಡಿದವರು ಯಾರು, ಅದರ ಹಿನ್ನೆಲೆ ಯಾರು, ಎಲ್ಲೆಲ್ಲಿ ಆಗಿದೆ ಎಂದೆಲ್ಲಾ ತನಿಖೆ ಆಗಬೇಕಲ್ಲವೇ ಎಂದರು.

ಉಡುಪಿ:ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸಿಎಂ ಬಳಿ ನಿಯೋಗ ; ಬ್ಯಾರಿ ಭಾಷೆ ಉಳಿವಿಗೆ ಲಿಪಿ ಅಗತ್ಯ: ರಹೀಂ ಉಚ್ಚಿಲ್ -Vishwanews24