ಜುಲೈ 21ರಂದು ಕರ್ನಾಟಕ ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಬಂದ್!

Featured, ರಾಜ್ಯ ನ್ಯೂಸ್

ಈ ಹಿಂದೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ಮಂಡಿಸಿದ ಬಜೆಟ್ ನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವುದಾಗಿ ಘೋಷಿಸಿತ್ತು. ಆದರೆ ಇದೀಗ ಸಮ್ಮಿಶ್ರ ಸರಕಾರವು ಆಡಲಿತಕ್ಕೆ ಬಂದ ಬಳಿಕ ಬಜೆಟ್ ನಲ್ಲಿ ಉಚಿತ ಬಸ್ ಪಾಸ್ ನೀಡುವುದರ ಕುರಿತಾದಂತೆ ಯಾವುದೇ ಚಕಾರವೆತ್ತಲಿಲ್ಲ. ಕಾಲೇಜು ಪ್ರಾರಂಭವಾಗಿ ತಿಂಗಳುಗಳೇ ಕಳೆದರೂ ಇನ್ನೂ ವಿದ್ಯಾರ್ಥಿಗಳಿಗೆ ಬಸ್ ಪಾಸ್ ದೊರೆತಿಲ್ಲ. ಇದೀಗ ಈ ಹಿನ್ನೆಲೆಯಲ್ಲಿ ಜುಲೈ 21ರಂದು ಶಾಲಾ ಕಾಲೇಜು ಬಂದ್ ನಡೆಸಲು ವಿದ್ಯಾರ್ಥಿ ಸಂಘಟನೆಗಳು ತೀರ್ಮಾನಿಸಿವೆ.

ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಸ್ವಯಂ ಪ್ರೇರಿತ ಬಂದ್ ನಡೆಸಲು ನಿರ್ಧರಿಸಿರುವುದಾಗಿ ವಿದ್ಯಾರ್ಥಿ ಸಂಘಟನೆಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಜುಲೈ 21ರಂದು ಶಾಲಾ, ಕಾಲೇಜು ಬಂದ್ ಗೆ ಸಹಕರಿಸಬೇಕಾಗಿ ವಿನಂತಿಸಿಕೊಂಡಿವೆ. ರಾಜ್ಯ ವಿಧಾನಸಭಾ ಚುನಾವಣೆಯ ಜೆಡಿಎಸ್ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿದ್ದರು. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸಾಧ್ಯವಿಲ್ಲ. ಅದಕ್ಕಾಗಿ ಯಾವುದೇ ಬಜೆಟ್ ಮೀಸಲಿಟ್ಟಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು.