ಜೂನ್ 1 ರೊಳಗೆ ಗ್ಯಾರಂಟಿ ಯೋಜನೆ ಜಾರಿ ಮಾಡಬೇಕು, ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ : ಪ್ರತಾಪ್ ಸಿಂಹ  – Vishwanews24

Featured, ರಾಜ್ಯ ನ್ಯೂಸ್

ಕಾರ್ಯಕರ್ತರನ್ನು ಅಪಾಯಕ್ಕೆ ತಳ್ಳಿದಕ್ಕೆ ಕ್ಷಮೆ ಕೇಳುತ್ತೇನೆ..

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಬಿಜೆಪಿ ಎಚ್ಚೆತ್ತುಕೊಂಡಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ : ಪ್ರತಾಪ್ ಸಿಂಹ 

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜೂನ್ 1 ರೊಳಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು, ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಬಿಜೆಪಿ ಎಚ್ಚೆತ್ತುಕೊಳ್ಳಬೇಕಿತ್ತು.

ಎಚ್ಚೆತ್ತುಕೊಂಡಿದ್ದರೆ ಬಿಜೆಪಿ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಪರ ಇದ್ದೇನೆ. ಗ್ಯಾರಂಟಿ ಕಾರ್ಡ್ ನಲ್ಲಿ ಯಾವುದೇ ಷರತ್ತುಗಳ ಬಗ್ಗೆ ಉಲ್ಲೇಖಿಸಲ್ಲ.ಜೂನ್ 1 ರವರೆಗೆ ಕಾಯುತ್ತೇವೆ. ಷರತ್ತುಗಳು ಇಲ್ಲದೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಷರತ್ತು ವಿಧಿಸಿದರೆ ಜೂನ್ 1 ರಿಂದ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರು:  ಸಹೋದ್ಯೋಗಿ ಯುವತಿಯರ ಖಾಸಗಿ ದೃಶ್ಯ ಸೆರೆಹಿಡಿದು ಲೈಂಗಿಕ ಕಿರುಕುಳ ಆರೋಪ  : ಕುಂದಾಪುರ ಮೂಲದ ಯುವಕ ಬಂಧನ – Vishwanews24

ರಾಜ್ಯ ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಾರ್ಯಕರ್ತರನ್ನು ಅಪಾಯಕ್ಕೆ ತಳ್ಳಿದಕ್ಕೆ ಕ್ಷಮೆ ಕೇಳುತ್ತೇನೆ. ನಮ್ಮ ಕಾರ್ಯಕರ್ತರು ನಿಜವಾಗಿಯೂ ನೊಂದಿದ್ದಾರೆ. ದೇಶ, ಧರ್ಮ ಅಂತಾ ನಮ್ಮ ಕಾರ್ಯಕರ್ತರು ದುಡಿಯುತ್ತಾರೆ ಎಂದರು.

Leave a Reply