ಜೂನ್ 16 ರಿಂದ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟೀಯ ಓಬಿಸಿ ಮೋರ್ಚಾ ಪ್ರಶಿಕ್ಷಣ ಕಾರ್ಯಾಗಾರ : ಯಶ್ ಪಾಲ್ ಸುವರ್ಣ – VIshwnaews24
ಜೂನ್ 16 ರಿಂದ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟೀಯ ಓಬಿಸಿ ಮೋರ್ಚಾ ಪ್ರಶಿಕ್ಷಣ ಕಾರ್ಯಾಗಾರ : ಯಶ್ ಪಾಲ್ ಸುವರ್ಣ
ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟೀಯ ಪ್ರಶಿಕ್ಷಣ ಕಾರ್ಯಗಾರ ಜೂನ್ 16 ರಿಂದ 18 ರವರೆಗೆ ಬೆಂಗಳೂರಿನ ಹೋಟೆಲ್ ರಮಡ ದಲ್ಲಿ ಆಯೋಜಿಸಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಪ್ರಶಿಕ್ಷಣ ಕಾರ್ಯಗಾರವನ್ನು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ ಕೆ ಲಕ್ಷ್ಮಣ ಅಧ್ಯಕ್ಷತೆ ವಹಿಸಲಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಶ್ರೀ ಜೆ ಪಿ ನಡ್ಡಾ, ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಬಿ ಎಲ್ ಸಂತೋಷ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬಿಜೆಪಿ ಉಸ್ತುವಾರಿ ಶ್ರೀ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲು, ಬಿಜೆಪಿ ಪ್ರಶಿಕ್ಷಣ ವಿಭಾಗದ ರಾಷ್ಟ್ರೀಯ ಪ್ರಭಾರಿ ಶ್ರೀ ಮುರಳೀಧರ ರಾವ್ ಹಾಗೂ ಪಕ್ಷದ ವಿವಿಧ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.
ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ಕಾರ್ಯಾಗಾರದ ಬಗ್ಗೆ ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚಿಸಿದ್ದು, ಪೂರ್ವ ಸಭೆಯಲ್ಲಿ ಯಲಹಂಕ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್ ಆರ್ ವಿಶ್ವನಾಥ್, ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ನಿಖಿಲ್ ಅನಂದ್, ಮೋರ್ಚಾದ ರಾಷ್ಟ್ರೀಯ ಕಾರ್ಯಾಲಯ ಕಾರ್ಯದರ್ಶಿ ಶ್ರೀ ಸಂಜಯ್ ಗುಜ್ಜರ್, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷರಾದ ಶ್ರೀ ನೆ ಲ ನರೇಂದ್ರ ಬಾಬು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸುರೇಶ್ ಬಾಬು, ಮೋರ್ಚಾದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
