ಜೆಡಿಎಸ್ ಪಕ್ಷವನ್ನು ಮುಗಿಸಲೇಬೇಕೆಂದು ಹೊರಟಂತ ನಾಯಕರ ಪಾಪದ ಕೊಡ ತುಂಬಿದೆ : ಸಿದ್ಧರಾಮಯ್ಯ ವಿರುದ್ಧ ಹೆಚ್ ಡಿ ಕೆ -Vishwanews24
ಜೆಡಿಎಸ್ ಪಕ್ಷವನ್ನು ಮುಗಿಸಲೇಬೇಕೆಂದು ಹೊರಟಂತ ನಾಯಕರ ಪಾಪದ ಕೊಡ ತುಂಬಿದೆ : ಸಿದ್ಧರಾಮಯ್ಯ ವಿರುದ್ಧ ಹೆಚ್ ಡಿ ಕೆ – Vishwanews24
ರಾಮನಗರ : ಜೆಡಿಎಸ್ ಪಕ್ಷವನ್ನು ಮುಗಿಸಲೇಬೇಕೆಂದು ಹೊರಟಂತ ನಾಯಕರ ಪಾಪದ ಕೊಡ ತುಂಬಿದೆ. ನಮ್ಮ ಪಕ್ಷಕ್ಕೆ ಚೂರಿ ಹಾಕಿ ಹೋಗಿದ್ದಾರಲ್ಲಾ ಅವರ ಪಾಪದ ಕೊಡ ತುಂಬಿದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಪಕ್ಷದಲ್ಲಿ ವಲಸೆ ಹಾಗೂ ಮೂಲ ಎಂಬ ಜಗಳ ಇಲ್ಲಿಗೆ ನಿಲ್ಲೊದಿಲ್ಲಾ. ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ಪ್ರಾರಂಭವಾಗಿದೆ. ಜೆಡಿಎಸ್ ಪಕ್ಷವನ್ನ ಮುಗಿಸಲೆಬೇಕೆಂದು ಹೊರಟ ನಾಯಕರ ಪಾಪದಕೊಡ ತುಂಬಿದೆ. ನಮ್ಮ ಪಕ್ಷಕ್ಕೆ ಚೂರಿ ಹಾಕಿ ಹೋಗಿದ್ದರಲ್ಲಾ ಅವರ ಪಾಪದ ಕೊಡ ತುಂಬಿದೆ ಎಂಬುದಾಗಿ ಹೇಳುವ ಮೂಲಕ, ಮಾಜಿ ಸಿಎಂ ಸಿದ್ದರಾಮಯ್ಯ ಹೆಸರಳೇದೆ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಇವರಿಗೆಲ್ಲಾ ರಾಜ್ಯದ ಜನತೆ ಪಾಠ ಕಲಿಸುವ ಸಮಯ ದೂರ ಇಲ್ಲ. ಮುಂದಿನ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಲಿದ್ದಾರೆ. ಅಲ್ಲಿಯವರೆಗೆ ಕಾದು ನೋಡಬೇಕೆ ಎಂಬುದಾಗಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
