ಜ್ಞಾನವಾಪಿ ಮಸೀದಿ – ಶೃಂಗಾರ ಗೌರಿ ಪ್ರಕರಣ: ಹಿಂದೂಗಳ ಅರ್ಜಿ ಪುರಸ್ಕರಿಸಿದ ಕೋರ್ಟ್ – Vishwanews24

Featured, ರಾಷ್ಟ್ರ ನ್ಯೂಸ್

ಜ್ಞಾನವಾಪಿ ಮಸೀದಿ – ಶೃಂಗಾರ ಗೌರಿ ಪ್ರಕರಣ: ಹಿಂದೂಗಳ ಅರ್ಜಿ ಪುರಸ್ಕರಿಸಿದ ಕೋರ್ಟ್

ಉತ್ತರಪ್ರದೇಶ: ಉತ್ತರಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ – ಶೃಂಗಾರ ಗೌರಿ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಇಂದು ಹೊರಬಿದ್ದಿದೆ. ಸ್ಥಳೀಯ ಜಿಲ್ಲಾ ಕೋರ್ಟ್ ಈ ಬಗ್ಗೆ ಸೋಮವಾರ ಆದೇಶ ಪ್ರಕಟಿಸಿದ್ದು, ಹಿಂದೂಗಳ ಅರ್ಜಿಯನ್ನು ಪುರಸ್ಕರಿಸಿ ತೀರ್ಪು ನೀಡಿದೆ.

ಜ್ಞಾನವಾಪಿ ಮಸೀದಿ, ಶೃಂಗಾರ ಗೌರಿ ಪ್ರಕರಣದ ಕುರಿತು ವಿಚಾರಣೆ ಮಾಡಬೇಕೇ, ಬೇಡವೇ ಎಂಬ ಬಗ್ಗೆ ವಾರಾಣಸಿ ಜಿಲ್ಲಾ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಸ್ಲಿಂ ಅರ್ಜಿದಾರರ ಆಕ್ಷೇಪಣೆಯನ್ನು ಕೋರ್ಟ್ ತಿರಸ್ಕರಿಸಿದೆ. ಹೀಗಾಗಿ ಹಿಂದೂಗಳ ಪರ ಅರ್ಜಿದಾರರಿಗೆ ಮೊದಲ ಗೆಲುವು ಸಿಕ್ಕಂತಾಗಿದೆ.

ಜಿಲ್ಲಾ ಕೋರ್ಟ್ ನ ನ್ಯಾಯಾಧೀಶರಾದ ಎ.ಕೆ.ವಿಶ್ವೇಶ್ ಅವರು ಮಸೀದಿ ಆವರಣದಲ್ಲಿರುವ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಅರ್ಜಿಯ ವಿಚಾರಣೆ ನಡೆಯಲಿದ್ದು, ಜಿಲ್ಲಾ ಕೋರ್ಟ್ ಸೆಪ್ಟೆಂಬರ್ 22ಕ್ಕೆ ವಿಚಾರಣೆ ಮುಂದೂಡಿದೆ.

ಪೋಕ್ಸೋ ಪ್ರಕರಣ : ಮುರುಘಾ ಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ – Vishwanews24

ಮಸೀದಿ ಆವರಣದಲ್ಲಿರುವ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಅರ್ಜಿಯ ವಿಚಾರಣೆ ನಡೆಯಲಿದ್ದು, ಜಿಲ್ಲಾ ಕೋರ್ಟ್ ಸೆಪ್ಟೆಂಬರ್ 22ಕ್ಕೆ ವಿಚಾರಣೆ ಮುಂದೂಡಿದೆ.

ಜ್ಞಾನವಾಪಿ ಮತ್ತು ಶೃಂಗಾರ ಗೌರಿಯ ಪೂಜೆ ಮಾಡಲು ಹಿಂದೂಗಳಿಗೆ ಅನುಮತಿ ನೀಡಬೇಕು ಎಂದು ಹಿಂದೂಗಳ ಪರವಾಗಿ ನಾಲ್ವರು ಮಹಿಳೆಯರು ನ್ಯಾಯಾಲಯದಲ್ಲಿ ಈ ಬೇಡಿಕೆಯನ್ನು ಸಲ್ಲಿಸಿದ್ದರು.

ಸಿದ್ದರಾಮಯ್ಯ ಹಗರಣಗಳ ದಾಖಲೆಗಳನ್ನು ಬಚ್ಚಿಟ್ಟಿದ್ದು ಅದನ್ನೆಲ್ಲಾ ಹೊರಗೆ ತೆಗೆಯುವ ಕೆಲಸ ನಾವು ಮಾಡುತ್ತಿದ್ದೇವೆ ..

 

Leave a Reply