ಟೀಮ್‌ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಠಿಣವಲ್ಲ: ಕಪಿಲ್ ದೇವ್ -Vishwanews24

Featured, ರಾಷ್ಟ್ರ ನ್ಯೂಸ್

ಮುಂಬೈ: ಟೀಮ್‌ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ ಎಂದು ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಹೇಳಿದ್ದಾರೆ.

ಕೋಚ್ ಆಯ್ಕೆ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಇದು ಕಠಿಣವಲ್ಲ. ನಿಮ್ಮ ಕೆಲಸವನ್ನು ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನೀವು ಮಾಡುತ್ತೀರಿ. ನಿಮ್ಮ ಜವಾಬ್ದಾರಿಗಳನ್ನು ನೀವು ಪೂರೈಸದಿದ್ದಾಗ ಮಾತ್ರ ಅದು ಕಠಿಣವಾಗುತ್ತದೆ’ ಎಂದು ಹೇಳಿದ್ದಾರೆ.

ರವಿಶಾಸ್ತ್ರಿ ಅವರು ಮುಂದಿನ ಕೋಚ್‌ ಆಗಿ ಮುಂದುವರಿಯಲಿ ಎನ್ನುವುದು ನಾಯಕ ವಿರಾಟ್‌ ಅಭಿಪ್ರಾಯವದು. ಅದು ನನ್ನದಲ್ಲ. ಎಲ್ಲರಿಗೂ ಅವರದೇ ಆದ ಅಭಿಪ್ರಾಯ ವ್ಯಕ್ತಪಡಿಸಲು ಸ್ವತಂತ್ರವಿದೆ. ಹಾಗಾಗಿ, ಇದರ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂದು ಹೇಳಿದರು.

ಇನ್ನು ಭಾರತ ತಂಡದ ಮುಖ್ಯ ತರಬೇತದಾರ ನೇಮಕ ಮಾಡುವ ಪ್ರಯತ್ನದಲ್ಲಿರುವ ಕಪಿಲ್ ದೇವ್, ಅಂಶುಮಾನ್‌ ಗಾಯಕ್ವಾಡ್‌ ಮತ್ತು ಶಾಂತ ರಂಗಸ್ವಾಮಿ ಅವರನ್ನೊಳಗೊಂಡ ಕೋಚ್ ಹುದ್ದೆಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲನೆಯಲ್ಲಿ ತಲ್ಲೀನರಾಗಿದ್ದಾರೆ.