ಡಾ.ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ : ಸಕಲ ಸರ್ಕಾರಿ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ – vishwanews24
ಡಾ.ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ : ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ
ನವದೆಹಲಿ: ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಿಗಮ್ ಬೋಧ್ ಘಾಟ್ ನಲ್ಲಿ ಶನಿವಾರ (ಡಿ.28) ಸಕಲ ಸರ್ಕಾರಿ ಹಾಗೂ ಮೂರು ಸೇನಾ ಗೌರವಗಳೊಂದಿಗೆ ಸಿಖ್ ಸಂಪ್ರದಾಯದ ಪ್ರಕಾರ ನಡೆಯಿತು.
ನಿಗಮ್ ಬೋಧ್ ಘಾಟ್ ನಲ್ಲಿ ಡಾ.ಸಿಂಗ್ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಸಚಿವ ಕಿರಣ್ ರಿಜಿಜು ಸೇರಿದಂತೆ ಹಲವು ರಾಜಕೀಯ ಗಣ್ಯರು ಅಂತಿಮ ಪುಪ್ಪ ನಮನ ಸಲ್ಲಿಸಿದರು.
ಕಾಸರಗೋಡು: ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣ ; 14 ಆರೋಪಿಗಳು ದೋಷಿಗಳೆಂದು ತೀರ್ಪು ಪ್ರಕಟ – vishwanews24
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಏಳು ದಿನಗಳ ಶೋಕಾಚರಣೆ ಘೋಷಿಸಿತ್ತು. ಅಲ್ಲದೇ ಸರ್ಕಾರಿ ಕಚೇರಿಗಳಲ್ಲಿ ಅರ್ಧಮಟ್ಟಕ್ಕೆ ರಾಷ್ಟ್ರಧ್ವಜ ಹಾರಿಸುವಂತೆ ಸೂಚಿಸಿತ್ತು. ಕಾಂಗ್ರೆಸ್ ಪಕ್ಷ ಕೂಡಾ ತನ್ನೆಲ್ಲಾ ನಿಗದಿತ(ಜನವರಿ 3ರವರೆಗೆ) ಕಾರ್ಯಕ್ರಮಗಳನ್ನು ರದ್ದುಪಡಿಸಿತ್ತು
