ಡಾಕ್ಟರ್ ಪ್ರಭಾಕರ ಶೆಟ್ಟಿ ಕಾಪು ನಿಧನ- ಅಂತಿಮ ದರ್ಶನ ಪಡೆದ ನೂರಾರು ಗಣ್ಯರು ಹಾಗೂ ಅಭಿಮಾನಿಗಳು: vishwanews24 

Featured, ಉಡುಪಿ

ಡಾಕ್ಟರ್ ಪ್ರಭಾಕರ ಶೆಟ್ಟಿ ಕಾಪು ನಿಧನ- ಅಂತಿಮ ದರ್ಶನ ಪಡೆದ ನೂರಾರು ಗಣ್ಯರು ಹಾಗೂ ಅಭಿಮಾನಿಗಳು: vishwanews24 

ಕಾಪು: ಕಾಪುವಿನ ಹಿರಿಯ ವೈದ್ಯ ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಗೌರವಾಧ್ಯಕ್ಷ, ಪ್ರಶಾಂತ್ ಹಾಸ್ಪಿಟಲ್‌ನ ಸಂಸ್ಥಾಪಕ, ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣೀಯ ಕ್ಷೇತ್ರದ ಸಾಧಕ ಡಾ| ಕೆ. ಪ್ರಭಾಕರ ಶೆಟ್ಟಿ (81) ಅವರು ಜ. 15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು‌.
ಸೋಮವಾರ ಬೆಳಗ್ಗೆ ಕೊಪ್ಪಲಂಗಡಿಯ ಸ್ವಗೃಹದಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದು ನೂರಾರು ಗಣ್ಯರು ಸೇರಿದಂತೆ ,ರಾಜಕೀಯ ಮುಖಂಡರು, ಅಭಿಮಾನಿಗಳು ಅಂತಿಮ ದರ್ಶನ ಪಡೆದರು.
ಸಂತಾಪ : ಡಾ| ಕೆ. ಪ್ರಭಾಕರ ಶೆಟ್ಟಿ ಅವರ ನಿಧನಕ್ಕೆ ಉಡುಪಿ ಶ್ರೀ ಪುತ್ತಿಗೆ ಮಠಾಽಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು,ಸಚಿವ ಸುನಿಲ್ ಕುಮಾರ್,ಕೋಟಾ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ, ಉದ್ಯಮಿ ಬಂಜರ ಪ್ರಕಾಶ್ ಶೆಟ್ಟಿ, ಸಹಕಾರಿ ಇಂದ್ರಾಳಿ ಜಯಕರ ಶೆಟ್ಟಿ, ಎರ್ಮಾಳು ಶಶಿಧರ ಶೆಟ್ಟಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಪಿ. ಶೆಟ್ಟಿ ಗುರ್ಮೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಕೆಪಿಸಿಸಿ ಸಂಯೋಜಕ ನವೀನ್‌ಚಂದ್ರ ಜೆ. ಶೆಟ್ಟಿ, ಮುಂಬೈಯ ಹಿರಿಯ ಪೊಲೀಸ್ ಅಧಿಕಾರಿ ದಯಾ ನಾಯಕ್, ಕಾಪು ಬಂಟರ ಸಂಘದ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾಪು ಬಿಲ್ಲವರ ಸಂಘದ ಅಧ್ಯಕ್ಷ ವಿಕ್ರಂ ಕಾಪು ಮೊದಲಾದ ಗಣ್ಯರು ಹಾಗೂ ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಆಡಳಿತಾಧಿಕಾರಿ ಆಲ್ಬನ್ ರೋಡ್ರಿಗಸ್, ಪ್ರಾಂಶುಪಾಲೆ ವರ್ಷಾ ಪ್ರಭು ಮತ್ತು ಸಿಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ.

 

 

Leave a Reply