ಡಿಕೆ ಶಿ ಅವರು ಧೈರ್ಯ ಕಳೆದುಕೊಳ್ಳುವುದು ಬೇಡ, ನಾವೆಲ್ಲರು ಅವರ ಜತೆ ಇದ್ದೇವೆ: ಸೋನಿಯಾ ಗಾಂಧಿ -Vishwanews24

Featured, ರಾಷ್ಟ್ರ ನ್ಯೂಸ್

ಹೊಸದೆಹಲಿ: ಡಿಕೆ ಶಿ ಅವರು ಧೈರ್ಯ ಕಳೆದುಕೊಳ್ಳುವುದು ಬೇಡ,  ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ.

ಇಂದು ಸಂಸದ ಡಿ.ಕೆ ಸುರೇಶ್ ಅವರಿಗೆ ಕರೆ ಮಾಡಿ ಡಿಕೆಶಿ ಅವರ ಬಗ್ಗೆ ಸೋನಿಯಾ ಗಾಂಧಿ ವಿಚಾರಿಸಿದರು. ಡಿಕೆ ಶಿವಕುಮಾರ್ ಅವರ ಆರೋಗ್ಯ ಹೇಗಿದೆ. ಅವರ ಮಾನಸಿಕ ಸ್ಥಿತಿ ಹೇಗಿದೆ ಎಂಬುವುದನ್ನು ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.

ಸುಮಾರು ಮೂರು ನಿಮಿಷಗಳ ಕಾಲ ಮಾತನಾಡಿದ ಸೋನಿಯಾ ಗಾಂಧಿ ಅವರು ‘ಬಿಜೆಪಿ ವಿರೋಧ ಪಕ್ಷಗಳ ನಾಯಕರನ್ನು ಮಟ್ಟಹಾಕಲು ದ್ವೇಷದ ರಾಜಕಾರಣ ಮಾಡುತ್ತಿದೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಧೈರ್ಯ ಕಳೆದುಕೊಳ್ಳುವುದು ಬೇಡ. ಈ ಸಮಯದಲ್ಲಿ ನಾವೆಲ್ಲರು ಅವರ ಜತೆ ಇದ್ದೇವೆ’ ಎಂದು ಸುರೇಶ್ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ.

ದ್ವೇಷದ ರಾಜಕಾರಣಕ್ಕೆ ಡಿ.ಕೆ ಶಿವಕುಮಾರ್ ಬಲಿಯಾಗಿದ್ದಾರೆ, ಕೇಂದ್ರ ಸರ್ಕಾರ ಇಡಿ, ಸಿಬಿಐ ತನಿಖಾ ಸಂಸ್ಥೆಗಳ ಮೂಲಕ ಕೆಲವು ವ್ಯಕ್ತಿಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ಟ್ವೀಟ್ ಮಾಡಿದ್ದರು. ಇದೀಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಡಿಕೆಶಿ ಬೆನ್ನಿಗೆ ನಿಂತಿದ್ದಾರೆ.