ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಜಾ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯನ್ನು ತಿರಸ್ಕರಿ ಬುಧವಾರ ಸಂಜೆ ಕೋರ್ಟ್ ತೀರ್ಪು ಪ್ರಕಟಿಸಿದೆ. ಇದರಿಂದ ಡಿಕೆಶಿಗೆ ತಿಹಾರ್ ಜೈಲುವಾಸ ಮುಂದುವರಿದಂತಾಗಿದೆ..

ಎರಡು ಕಡೆಯ ವಾದವನ್ನು ಸುದೀರ್ಘವಾಗಿ ಆಲಿಸಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಇಂದು ಮಧ್ಯಾಹ್ನ 3.30ಕ್ಕೆ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು. ಆದರೆ ಇಂದು ಸಂಜೆ 5. 11 ರ ವೇಳೆಗೆ  ಆದೇಶವನ್ನು ಪ್ರಕಟಿಸಿದರು.

ಸೆ.21ರಂದು ಬೆಳಗ್ಗೆ 11 ಗಂಟೆಯಿಂದ ಸುದೀರ್ಘವಾದ ವಾದ, ಪ್ರತಿವಾದ ಆಲಿಸಿದ ವಿಶೇಷ ನ್ಯಾಯಾಲಯ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.  ಡಿಕೆ ಶಿವಕುಮಾರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ ಇಡಿ ವಾದ ವಾದ ಕೇವಲ ಊಹಾತ್ಮಕ, ಸಿನಿಮಾ ಸ್ಟೋರಿಯಂತಿದೆ. ಹೀಗಾಗಿ ಜಾಮೀನು ಮಂಜೂರು ಮಾಡಿ ಎಂದು ಕೇಳಿಕೊಂಡಿದ್ದರು.