ಡಿಕೆ ಶಿವಕುಮಾರ್​ ಯಾರನ್ನು ಕೇಳಿ ಮುಂಬೈಗೆ ಹೋದರು ??: ಡಿ.ಕೆ ಶಿ ವಿರುದ್ದ ಸಿದ್ದರಾಮಯ್ಯ ಅಸಮಾಧಾನ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಅತೃಪ್ತರ ಮನವೊಲಿಕೆಗೆ ಮುಂಬೈಗೆ ತೆರಳಿರುವ ಡಿಕೆಶಿ ವಿರುದ್ಧ ಮಹಾರಾಷ್ಟ್ರ ಸರ್ಕಾರ ನಡೆದುಕೊಂಡ ರೀತಿ ರಾಜ್ಯ ಕಾಂಗ್ರೆಸ್​ ನಾಯಕರಿಗೆ ಮುಜುಗರ ಉಂಟು ಮಾಡಿದೆ. ಈ ಕುರಿತು ಅಸಮಾಧಾನ ಹೊರ ಹಾಕಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್​ ಯಾರನ್ನು ಕೇಳಿ ಮುಂಬೈಗೆ ಹೋದರು ಎಂದು ಆಪ್ತರ ಎದುರು ಅಸಮಾಧಾನ ಹೊರ ಹಾಕಿದ್ದಾರೆ ..

ಮುಂಬೈನಲ್ಲಿ ಡಿಕೆ ಶಿವಕುಮಾರ್​ ಅವರನ್ನು ಹೋಟೆಲ್​ ಒಳಗೂ ಸೇರಿಸಿಲ್ಲ, ಜತೆಗೆ ಅತೃಪ್ತ ಶಾಸಕರು ಮುಂಬೈ ಪೊಲೀಸ್​ ಆಯುಕ್ತರಿಗೆ ಭದ್ರತೆ ನೀಡಿ ಎಂದು ಮನವಿ ಮಾಡಿದ್ದಾರೆ. ಇದೆಲ್ಲದರಿಂದ ಪಕ್ಷದ ವರ್ಚಸ್ಸಿಗೆ ತೊಂದರೆಯಾಗುತ್ತದೆ. ಹೀಗಿರುವಾಗ ಕೇವಲ ಮುಖ್ಯಮಂತ್ರಿಯ ಗಮನಕ್ಕೆ ತಂದು ಪಕ್ಷದ ನಾಯಕರಿಗೂ ಹೇಳದೇ ಹೋಗಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಭಿನ್ನಮತ ವ್ಯಕ್ತಪಡಿಸಿದ್ದಾರೆ .

ಸಭೆಯೊಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ , ಪ್ರಸ್ತುತ ರಾಜಕೀಯ ಬೆಳವಣಿಗೆಗಳಿಗೆ ನಾನೇ ಕಾರಣ ‌ಎಂಬಂತೆ ಕೆಲವರು ಆರೋಪಿಸುತ್ತಿದ್ದಾರೆ. ಆದರೆ ನಾನು ಮೊದಲಿನಿಂದಲೂ ಅತೃಪ್ತರನ್ನು ಮನವೊಲಿಸುವ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ನನ್ನ ಜವಾಬ್ದಾರಿಯನ್ನ ನಾನು ನಿಭಾಯಿಸಿದ್ದೇನೆ. ಕೆಲ ತಿಂಗಳ ಹಿಂದೆ ಬೆಳಗಾವಿ ಜಿಲ್ಲೆಯ ವಿಷಯದಲ್ಲಿ ಸಚಿವ ಡಿ.ಕೆ ಶಿವಕುಮಾರ್​ ಮೂಗು ತೂರಿಸುತ್ತಿದ್ದಾರೆಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದರು. ಈ ವಿಚಾರವಾಗಿಯೂ ನನ್ನನ್ನು ದೂಷಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು..