ಡಿವೈಡರ್​ಗೆ ಡಿಕ್ಕಿ ಹೊಡೆದು ಮಗುಚಿದ ಬಿಎಂಟಿಸಿ ಬಸ್​ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ರಾಜಾಜಿನಗರ ಪ್ರವೇಶದ ಬಳಿಯ ರಸ್ತೆಯಲ್ಲಿ ಬಿಎಂಟಿಸಿ ಬಸ್‌ ಪಲ್ಟಿಯಾಗಿದ್ದು, 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ರಸ್ತೆಯ ಅಂಚಿನ ಡಿವೈಡರ್‌ ಮೇಲೆ ಹತ್ತಿದ ಪರಿಣಾಮ ವಾಲಿಕೊಂಡು ರಸ್ತೆಗೆ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಶಾಸಕ ಗೋಪಾಲಯ್ಯ ಭೇಟಿ ನೀಡಿದ್ದಾರೆ. ರಾಜಾಜಿನಗರದ 1ನೇ ಬ್ಲಾಕ್‌ನ ಮಹಾಲಕ್ಷ್ಮಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ ನಡೆದಿದೆ.

ರಾಜಾಜಿನಗರ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮಲ್ಲೇಶ್ವರ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.