ತಂದೆಯ ಸಾವಿನ ಬಗ್ಗೆ ಅನುಮಾನ : ತಾಯಿ ವಿರುದ್ಧವೇ ದೂರು ನೀಡಿದ ಮಗಳು – vishwanews24

Featured, ರಾಜ್ಯ ನ್ಯೂಸ್

 ತಂದೆಯ ಸಾವಿನ ಬಗ್ಗೆ ಅನುಮಾನ : ತಾಯಿ ವಿರುದ್ಧವೇ ದೂರು ನೀಡಿದ ಮಗಳು

 ಹೂತಿದ್ದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ

ಬೆಳಗಾವಿ: ಖಾಸಗಿ ಫೈನಾನ್ಸ್ ಮೂಲಕ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ವ್ಯಕ್ತಿಯೊಬ್ಬನ ಸಾವು ಅನುಮಾನಕ್ಕೆ ಕಾರಣವಾಗಿದೆ. ತಂದೆ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಮಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಸಹಜ ಸಾವೆಂದು ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಸಲಾಗಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಪೊಲೀಸರು ಮುಂದಾಗಿರುವ ಘಟನೆ ನಡೆದಿದೆ.

ಅಕ್ಟೋಬರ್ 10 ರಂದು ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲಾಗಿತ್ತು. ಆದರೇ ಅದೊಂದು ಸಿಸಿಟಿವಿ ವೀಡಿಯೋ, ಸಾವಿಗೆ ಟ್ವಿಸ್ಟ್ ಕೊಟ್ಟಿದೆ. ಇದರ ರಹಸ್ಯ ಮಗಳು ಹೊರಗೆ ತರುವ ಕೆಲಸ ಮಾಡಿದ್ದಾರೆ.

ಕಾರ್ಕಳ: ಅಕ್ರಮವಾಗಿ ನೆಲೆಸಿರುವ  ಮತ್ತಿಬ್ಬರು ಬಾಂಗ್ಲಾ ವಲಸಿಗರು ವಶಕ್ಕೆ – vishwanews24

ಘಟನೆ ಏನು?
ಖಾಸಗಿ ಫೈನಾನ್ಸ್ ಮೂಲಕ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ 47 ವರ್ಷದ ಸಂತೋಷ ಪದ್ಮಣ್ಣವರ್ ಇದೇ ಅಕ್ಟೋಬರ್ 9 ರಂದು ಮನೆಯಲ್ಲಿ ಬೆಳಗಿನ ಜಾವ ಮೃತಪಟ್ಟಿದ್ದರು. ಇದೊಂದು ಸಹಜ ಸಾವು ಎಂದು ಅಕ್ಟೋಬರ್ 10 ರಂದು ಎಲ್ಲರೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಿದ್ದರು. ಆದರೇ ಎರಡು ದಿನಗಳ ಹಿಂದೆ ಮೃತ ಸಂತೋಷ್ ಮಗಳು ಸಂಜನಾ ಮನೆಯಲ್ಲಿ ಕುಳಿತ ಸಂದರ್ಭದಲ್ಲಿ ಮನೆಗೆ ಯಾರೆಲ್ಲ ಬಂದಿದ್ದರು ಎಂದು ಸಿಸಿಟಿವಿಯಲ್ಲಿ ಪರಿಶೀಲನೆ ಮಾಡಿದ್ದಾಳೆ. ಈ ವೇಳೆ ತಾಯಿ ಮಗಳನ್ನು ಗದರಿಸಿದ್ದು, ಸ್ನಾನಕ್ಕೆ ಹೋಗುವಂತೆ ಹೇಳಿದ್ದಾರೆ. ಸ್ನಾನ ಮಾಡಿ ವಾಪಸ್ ಬರುವಷ್ಟರಲ್ಲಿಯೇ ತಾಯಿ ಉಮಾ ಸಿಸಿಟಿವಿ ದೃಶ್ಯವನ್ನು ಡಿಲೀಟ್ ಮಾಡಿದ್ದಳು. ಇದು ಮಗಳಿಗೆ ಅನುಮಾನ ಮೂಡಿಸಿದೆ.

ಸಂಜನಾ ನೇರವಾಗಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ತಂದೆಯ ಸಾವಿನ ಬಗ್ಗೆ ಅನುಮಾನ ಇದೆ, ತನಿಖೆ ಮಾಡುವಂತೆ ಮನವಿ ಮಾಡಿದ್ದಳು. ತಂದೆ ದೇಹ ದಾನ ಮಾಡಲಾಗಿತ್ತು. ಆದರೆ ಖಾಸಗಿ ಆಸ್ಪತ್ರೆಯಲ್ಲಿ ಕೇವಲ ಕಣ್ಣು ಮಾತ್ರ ಪಡೆದುಕೊಂಡಿದ್ದು, ದೇಹವನ್ನ ಪಡೆದುಕೊಂಡಿಲ್ಲ ಎಂದು ಪೊಲೀಸರ ಮುಂದೆ ಮಗಳು ಹೇಳಿದ್ದಳು. ಜೊತೆಗೆ ತಾಯಿಗೆ ಇನ್ಸ್ಟಾಗ್ರಾಂನಲ್ಲಿ ಒಬ್ಬ ಮಂಗಳೂರು ಮೂಲದ ಯುವಕ ಪರಿಚಯವಾಗಿದ್ದು, ಆತನ ಜೊತೆಗೆ ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ಪುತ್ರಿ ದೂರು ನೀಡಿದ್ದಾಳೆ.

ಉಡುಪಿ: ಪ್ರಸಾದ್ ಕಾಂಚನ್ ವಿರುದ್ದ ಮಾನಹಾನಿ ಪೋಸ್ಟ್ ; ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್ಪಿಗೆ  ಮನವಿ – vishwanews24

ಸಂಜನಾ ದೂರು ಹಿನ್ನೆಲೆಯಲ್ಲಿ ಸಂತೋಷ ಪದ್ಮಣ್ಣವರ್ ಮೃತದೇಹವನ್ನು ಹೊರ ತೆಗೆದು ಮತ್ತೊಮ್ಮೆ ಮರಣೋತ್ತರ ಪರೀಕ್ಷೆಗೆ ಪೊಲೀಸರು ಒಳಪಡಿಸಿದ್ದಾರೆ. ಮೃರಣೊತ್ತರ ಪರೀಕ್ಷೆ ವರದಿ ಬಂದ ಬಳಿಕ ಸಹಜ ಸಾವೋ, ಕೊಲೆಯೋ ಎಂಬುದು ಖಚಿತವಾಗಿ ಗೊತ್ತಾಗಲಿದೆ. ಇನ್ನು ಪದ್ಮಣ್ಣವರ್ ಮನೆಗೆ ಅಪರಿಚತರು ಬಂದು ಹೋಗಿರೋದು ಸಿಸಿಟಿವಿಯಲ್ಲಿ ದಾಖಲಾಗಿದೆ. ಸಂತೋಷ್ ಅನೇಕರಿಗೆ ಬಡ್ಡಿ ಮೇಲೆ ಹಣ ಕೊಟ್ಟಿದ್ದ. ಹಣದ ವ್ಯವಹಾರ ಹಿನ್ನೆಲೆಯಲ್ಲಿ ಏನಾದರೂ ಕೊಲೆಯಾಗಿದೆಯಾ ಅಥವಾ ವೈಯಕ್ತಿಕ ಕಾರಣವೇ ಎಂಬುದು ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ.

Leave a Reply