ತಮಿಳುನಾಡಿನಿಂದ ಬಂದು ಬಾಂಬ್ ಇಡುತ್ತಾರೆ : ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ: ಶೋಭಾ ಕರಂದ್ಲಾಜೆ – Vishwanews24
ತಮಿಳುನಾಡಿನಿಂದ ಬಂದು ಬಾಂಬ್ ಇಡುತ್ತಾರೆ : ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ: ಶೋಭಾ ಕರಂದ್ಲಾಜೆ
ಬೆಂಗಳೂರು: “ತಮಿಳುನಾಡಿ ನಲ್ಲಿ ಟ್ರೈನಿಂಗ್ ಪಡೆದು ಬೆಂಗಳೂರಿಗೆ ಬಂದು ಬಾಂಬ್ ಇಡುತ್ತಾರೆ’ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆಯು ಸೋಷಿ ಯಲ್ ಮೀಡಿಯಾದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಪ್ರತಿಪಕ್ಷ ನಾಯಕ ಪಳನಿಸ್ವಾಮಿ ಅವರು ಈ ಹೇಳಿಕೆಯನ್ನು ಖಂಡಿಸಿದ್ದಾರೆ.
ಹನುಮಾನ ಚಾಲೀಸಾ ಪ್ರಕರಣ ಸಂಬಂಧ ಹಿಂದೂ ಯುವಕನ ಮೇಲೆ ಹಲ್ಲೆ ನಡೆದಿದ್ದನ್ನು ಖಂಡಿಸಿ, ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದಾಗ ಶೋಭಾ ಅವರು, ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಉಲ್ಲೇಖೀಸಿ, ತಮಿಳುನಾಡು ವಿರುದ್ಧ ಆರೋಪ ಮಾಡಿದ್ದರು. ಈ ಹೇಳಿಕೆಯು ಆಕ್ರೋಶಕ್ಕೆ ಕಾರಣವಾಗುತ್ತಿ ದ್ದಂತೆ ಶೋಭಾ ಅವರು, “ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆಕೋರುತ್ತೇನೆ’ ಮತ್ತೆ ಟ್ವೀಟ್ ಮಾಡಿದ್ದಾರೆ.
To my Tamil brothers & sisters,
I wish to clarify that my words were meant to shine light, not cast shadows. Yet I see that my remarks brought pain to some – and for that, I apologize. My remarks were solely directed towards those trained in the Krishnagiri forest,
1/2— Shobha Karandlaje (Modi Ka Parivar) (@ShobhaBJP) March 19, 2024
ತ.ನಾಡು ಸಿಎಂ ಹೇಳಿದ್ದೇನು?: “ಶೋಭಾ ಅವರ ಬೇಜವಾ ಬ್ದಾರಿ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಬಿಜೆಪಿಯ ಈ ವಿಭಜನಕಾರಿ ಮಾತುಗಳನ್ನು ಕನ್ನಡಿಗರು ಮತ್ತು ತಮಿಳರು ಸಂಪೂರ್ಣವಾಗಿ ತಿರಸ್ಕರಿಸಲಿ ದ್ದಾರೆ. ಶಾಂತಿ, ಸೌಹಾರ್ದ ಮತ್ತು ರಾಷ್ಟ್ರೀಯ ಐಕ್ಯತೆಗೆ ಭಂಗ ಉಂಟು ಮಾಡುತ್ತಿರುವ ಶೋಭಾ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿ ಸುತ್ತೇನೆ. ಚುನಾವಣಾ ಆಯೋಗವು ಈ ದ್ವೇಷ ಭಾಷಣದ ಬಗ್ಗೆ ಕೂಡಲೇ ಗಮನ ಹರಿಸಿ, ಕಠಿಣ ಕ್ರಮಕ್ಕೆ ಮುಂದಾಗಬೇಕು’ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.
