ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು ಬಿಟ್ಟಿದ್ದು, ವಿಚ್ಛೇದನಕ್ಕಾಗಿ ಪತ್ನಿ ಸಂಗೀತಾ ಸ್ವರ್ಣಲಿಂಗಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚ್ಛೇದನ ಪ್ರಕರಣದ ವಿಚಾರಣೆಯನ್ನು ಚೆಂಗಲ್ಪಟ್ಟು ಮಹಿಳಾ ನ್ಯಾಯಾಲಯವು ಮತ್ತೆ ಮುಂದೂಡಿದೆ.
ಇಂದು ನಡೆದ ವಿಚಾರಣೆಗೆ ಕೋರ್ಟ್ ಸೂಚನೆಯಂತೆ ಸಿಎಂ ಜೋಸೆಫ್ ವಿಜಯ್ ಮತ್ತು ಸಂಗೀತಾ ಖುದ್ದಾಗಿ ಹಾಜರಾಗಿದ್ದರು. ಬೆಳಿಗ್ಗೆ 10.30ರ ಸುಮಾರಿಗೆ ಆರಂಭವಾದ ವಿಚಾರಣೆಯಲ್ಲಿ ದಂಪತಿ ಉಪಸ್ಥಿತರಿದ್ದರಾದರೂ, ಯಾವುದೇ ಪ್ರಮುಖ ನಿರ್ಧಾರ ಅಥವಾ ಸಂಧಾನ ಸೂತ್ರಗಳು ಮೂಡಿಬರದೆ ಸೆಷನ್ ಮುಕ್ತಾಯಗೊಂಡಿತು. ವಾದ ಆಲಿಸಿದ ಕೋರ್ಟ್ ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದೆ.
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24
