ತಮ್ಮ ಮೊದಲ ಬಜೆಟ್ ಭಾಷಣದಲ್ಲಿ ಮತ್ತೊಮ್ಮೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡುವಲ್ಲಿ ಕಾರಣರಾದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದ ನಿರ್ಮಲಾ ಸೀತಾರಾಮನ್ -Vishwanews24
ನವದೆಹಲಿ: ತಮ್ಮ ಮೊದಲ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮತ್ತೊಮ್ಮೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡುವಲ್ಲಿ ಕಾರಣರಾದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ದೇಶದಲ್ಲಿ ಮೊದಲ ಬಾರಿಗೆ ಶೇ.67.9 ಮತದಾನ ನಡೆದಿದೆ. ಯುವಜನತೆ, ಹೊಸ ಮತದಾರರು, ಮಹಿಳೆಯರು ರಾಷ್ಟ್ರೀಯ ಭದ್ರತೆ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಿದ್ದಾರೆ ಎಂದು ತಿಳಿಸಿದರು.
2014-19ರ ಅವಧಿಯಲ್ಲಿ ರಾಜ್ಯ ಕೇಂದ್ರಗಳ ಸಂಬಂಧ ಸುಧಾರಣೆಯಾಗಿದೆ. ಜಿಎಸ್ಟಿಯನ್ನು ಜಾರಿಗೆ ತಂದಿದ್ದೇವೆ.
ಕೆಂಪುಬಟ್ಟೆಯಲ್ಲಿ ಬಜೆಟ್ ಗೆ ಸಂಬಂಧಪಟ್ಟ ದಾಖಲೆಗಳನ್ನು ಇಟ್ಟು ಆ ಬಟ್ಟೆಯನ್ನು ನಾಲ್ಕು ಮಡಿಕೆ ಮಾಡಿ ರಿಬ್ಬನ್ನಿಂದ ಕಟ್ಟಲಾಗಿದೆ. ಅದರ ಮೇಲೆ ರಾಷ್ಟ್ರಲಾಂಛನವಾದ ನಾಲ್ಕು ಮುಖದ ಸಿಂಹದ ಚಿತ್ರವಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಹ್ಮಣಿಯನ್ ಅವರು, ಬಟ್ಟೆಯಲ್ಲಿ ಕಟ್ಟುವುದು ನಮ್ಮ ದೇಶದ ಸಂಪ್ರದಾಯ. ಪಾಶ್ಚಾತ್ಯ ಸಂಸ್ಕೃತಿಯಿಂದ ಹೊರಬರಲು ಈ ಬಾರಿ ಬ್ರೀಫ್ಕೇಸ್ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.

