ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮೀಜಿ ಒಡಿಶಾ ದಲ್ಲಿ ಬಂಧನ – vishwanews24

Featured, ರಾಜ್ಯ ನ್ಯೂಸ್

ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮೀಜಿ ಒಡಿಶಾ ದಲ್ಲಿ ಬಂಧನ

ಬೆಂಗಳೂರು : ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿಯಿಂದ ಎಂಎಲ್‌ಎ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಒಡಿಶಾ ರಾಜ್ಯದಲ್ಲಿ ಬಂಧಿಸಿದ್ದಾರೆ.

ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಚಲಿಸುತ್ತಿದ್ದ ರೈಲಿನಲ್ಲೇ ಹಾಲಶ್ರೀಯನ್ನು ಬಂಧಿಸಿರುವ ಪೊಲೀಸರು ಅಲ್ಲಿಂದ ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ.

 

Leave a Reply