ತಿಂಗಳ ಮಾಧ್ಯಮ ಸಂವಾದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ-vishwanews24
ತಿಂಗಳ ಮಾಧ್ಯಮ ಸಂವಾದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪ್ರೆಸ್ಕ್ಲಬ್ ಸಹಯೋಗದಲ್ಲಿ ಪ್ರತಿ ತಿಂಗಳು ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯ ವ್ಯಕ್ತಿಗಳ ಜೊತೆ ಸಂವಾದ ನಡೆಸುವ ‘ತಿಂಗಳ ಮಾಧ್ಯಮ ಸಂವಾದ’ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಚಾಲನೆ ನೀಡಿ, ಬಳಿಕ ಪತ್ರಕರ್ತರು ಹಾಗೂ ಮಾಧ್ಯಮದವರ ಜತೆ ಸಂವಾದ ನಡೆಸಿದರು.
ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು,ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ,ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ,ಪ್ರೆಸ್ ಕ್ಲಬ್ ಸಂಚಾಲಕ ಸುಭಾಶ್ಚಂದ್ರ ವಾಗ್ಲೆ ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್ -ವಿಶ್ವನ್ಯೂಸ್24

