ತುಮಕೂರು : ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ನಾಳೆ ತುಮಕೂರು ಬಂದ್.. Vishwanews24

Featured, ರಾಜ್ಯ ನ್ಯೂಸ್

ತುಮಕೂರು : ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ನಾಳೆ ತುಮಕೂರು ಬಂದ್.. Vishwanews24

ತುಮಕೂರು: ಬಜರಂಗದಳದ ಜಿಲ್ಲಾ ಸಂಚಾಲಕ ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಿರೋದನ್ನು ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳು ನಾಳೆ ತುಮಕೂರು ಬಂದ್ ಗೆ ಕರೆ ನೀಡಿದೆ.

ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಇತರ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬಂದ್‌ಗೆ ಕರೆ ಕೊಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಹಿಂದೂಗಳ ಮೇಲೆ ಪದೇಪದೇ ಹಲ್ಲೆ ನಡೆಯುತ್ತಿದೆ. ಗೋ ಸಂರಕ್ಷಣೆಗೆ ಮುಂದಾದವರ ಮೇಲೆ ಹಲ್ಲೆ ಮಾಡುವುದು, ಬೆದರಿಕೆ ಹಾಕುವುದು ಮುಂದುವರೆದಿದೆ. ನಗರದಲ್ಲಿ ಕಸಾಯಿ ಖಾನೆಗಳು ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ನಗರ ಶಾಸಕ ಜ್ಯೋತಿಗಣೇಶ್, ವಿಶ್ವದಲ್ಲಿ ಹಿಂದೂಗಳಿಗೆ ಮುಕ್ತವಾಗಿರುವ ದೇಶ ಅಂದರೆ ಅದು ಭಾರತ ಮಾತ್ರ. ಇಲ್ಲೂ ಈ ರೀತಿ ದೌರ್ಜನ್ಯಗಳು ನಡೆದರೆ ಹಿಂದೂಗಳನ್ನು ಅರಬ್ಬೀ ಸಮುದ್ರಕ್ಕೆ ಎಸೆಯಬೇಕಾಗುತ್ತದೆ. ಹಾಗಾಗಿ ಹಿಂದೂ ಸಮಾಜ ಒಗ್ಗಟ್ಟಾಗಿ ನಮ್ಮ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಬೇಕು ಎಂದು ಕರೆ ನೀಡಿದರು.

ಏನಿದು ಪ್ರಕರಣ?:
ಬಜರಂಗದಳ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ತುಮಕೂರು ನಗರದ ಗುಬ್ಬಿ ಗೇಟ್ ವೃತ್ತದಲ್ಲಿ ನಡೆದಿದೆ. ಬಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಹಾಗೂ ಅವರ ಜೊತೆಯಲ್ಲಿದ್ದ ಕಿರಣ್ ಎಂಬವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಚಿಕಿತ್ಸೆಗಾಗಿ ತುಮಕೂರು ಜಿಲ್ಲೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರು ಕಾರಿನಲ್ಲಿ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು, ಮನಸ್ಸೋ ಇಚ್ಛೆ ರಾಡ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ವಿಕೃತ ಮನಸ್ಥಿತಿಯವರು ಮಾತ್ರ 100 ಕೋಟಿ ಲಸಿಕೆ ಕೊಟ್ಟಿದ್ದೇವೆಂದು ಸಂಭ್ರಮ ಪಟ್ಟು ಪ್ರಚಾರ ಪಡೆಯುತ್ತಾರೆ : ಕಾಂಗ್ರೆಸ್ ಮುಖಂಡ  ಹರಿಪ್ರಸಾದ್ – Vishwanews24