ತೆರೆದ ವಾಹನದ ಮೂಲಕ ಶಿವಮೊಗ್ಗ ಸಮಾವೇಶಕ್ಕೆ ಅದ್ದೂರಿಯಾಗಿ ಎಂಟ್ರಿಕೊಟ್ಟಿ ಮೋದಿಗೆ ಜೈಕಾರ ಹಾಕಿ ಸ್ವಾಗತ – Vishwanews24

Featured, ರಾಜ್ಯ ನ್ಯೂಸ್

ತೆರೆದ ವಾಹನದ ಮೂಲಕ ಶಿವಮೊಗ್ಗ ಸಮಾವೇಶಕ್ಕೆ ಅದ್ದೂರಿಯಾಗಿ ಎಂಟ್ರಿಕೊಟ್ಟಿ ಮೋದಿಗೆ ಜೈಕಾರ ಹಾಕಿ ಸ್ವಾಗತ

ಶಿವಮೊಗ್ಗ : ಲೋಕಸಭಾ ಚುನಾವಣೆ ಪ್ರಚಾರವನ್ನು ಅದ್ಧೂರಿಯಾಗಿ ಆರಂಭಿಸಿರುವ ಬಿಜೆಪಿ ಇದೀಗ ಕರ್ನಾಟಕದಲ್ಲಿ ಎರಡನೇ ಸಮಾವೇಶ ಆಯೋಜಿಸಿದೆ. ಕಲಬುರಗಿ ಬಳಿಕ ಶಿವಮೊಗ್ಗದಲ್ಲಿ ಆಯೋಜಿಸಿದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರೆದ ವಾಹನದಲ್ಲಿ ಅದ್ದೂರಿಯಾಗಿ ಎಂಟ್ರಿಕೊಟ್ಟಿದ್ದಾರೆ. ಮೋದಿ ಆಗಮಿಸುತ್ತಿದ್ದಂತೆ ಲಕ್ಷಾಂತರ ಮಂದಿ ಎದ್ದು ನಿಂತು ಮೋದಿಗೆ ಜೈಕಾರ ಹಾಕಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯ ತೆರೆದ ವಾಹನದಲ್ಲಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ, ದಾವಣಗೆರೆ ಲೋಕಸಭಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಜೊತೆಗೆ ತೆರೆದ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಗೆ ಆಗಮಿಸಿದರು. ಈ ವೇಳೆ ಕಾರ್ಯಕರ್ತರ ಜಯ ಘೋಷ, ಮೋದಿ ಮೋದಿ ಘೋಷಣೆ, ಬಾರತ್ ಮಾತಾ ಕಿ ಜೈಕಾರದಿಂದ ಸಭೆ ಝೇಂಕರಿಸಿತ್ತು.

ಉಡುಪಿ:  ಹೋಳಿ ಆಚರಣೆಯ ಹೆಸರಿನಲ್ಲಿ ಡಿ ಜೆ ಪಾರ್ಟಿ ಆಯೋಜಿಸಿ ಹಿಂದೂ ಭಾವನೆಗೆ ಧಕ್ಕೆ ತರುವುದನ್ನು ನಿಲ್ಲಿಸಿ : ದಿನೇಶ್ ಮೆಂಡನ್ – Vishwanews24

ಪ್ರಧಾನಿ ಮೋದಿಯ ಬೃಹತ್ ಸಮಾವೇಶದಲ್ಲಿ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದಾರೆ. ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಘಟಾನಘಟಿ ರಾಜ್ಯ ಬಿಜೆಪಿ ನಾಯಕರ ಉಪಸ್ಥಿತರಿದ್ದಾರೆ. ಇದರ ಜೊತೆಗೆ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಾ, ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ ಸಿ ಎನ್ ಮಂಜುನಾಥ್, ದಾವಣಗೆರೆ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್, ಉಡುಪಿ ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಉಪಸ್ಥಿತಿರಿದ್ದಾರೆ. ಈ ಸಮಾವೇಶದಲ್ಲಿ ಜೆಡಿಎಸ್ ಶಾಸಕಿ ಶಾರದ ಪುರಿ ನಾಯಕ್ ಗೂ ಅವಕಾಶ ನೀಡಲಾಗಿದೆ.

ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ನಾನು ಹಿಂದೆ ಸರಿಯಲ್ಲ : ಈಶ್ವರಪ್ಪ – Vishwanews24

Leave a Reply