ದರ್ಶನ್ ಪ್ರಕರಣ : ಅಧಿಕಾರಿಗಳು ಬಿಟ್ರೆ ಯಾರೂ ಇದರಲ್ಲಿ ಮಧ್ಯಪ್ರವೇಶ ಮಾಡಿಲ್ಲ, ಅದರ ಅವಶ್ಯಕತೆ ಯಾರಿಗೂ ಇಲ್ಲ: ಪರಮೇಶ್ವರ್ ಸ್ಪಷ್ಟನೆ – vishwanews24

Featured, ರಾಜ್ಯ ನ್ಯೂಸ್

ಡಿ ಗ್ಯಾಂಗ್ ಕೊಲೆ ಪ್ರಕರಣ : ನಾನು, ಸಿಎಂ ಯಾರಿಗೂ ಸೊಪ್ಪು ಹಾಕಲ್ಲ: ಗೃಹ ಸಚಿವ ಪರಮೇಶ್ವರ್ 

ಬೆಂಗಳೂರು: ದರ್ಶನ್ ಕೇಸ್ ವಿಚಾರದಲ್ಲಿ ಕ್ಯಾಬಿನೆಟ್ ನಲ್ಲಿ ಸಚಿವರಿಗೆ ಮುಖ್ಯಮಂತ್ರಿ ಸೂಚನೆ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅಥವಾ ಸಿಎಂ ಯಾರಿಗೂ ಸೊಪ್ಪು ಹಾಕಲ್ಲ, ಯಾರೂ ಕೂಡ ನಮ್ಮ ಹತ್ರ ಬಂದಿಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬ್ರೀಫಿಂಗ್ ಮಾಡೋ ಅಧಿಕಾರಿಗಳು ಬಿಟ್ರೆ ಯಾರೂ ಇದರಲ್ಲಿ ಮಧ್ಯಪ್ರವೇಶ ಮಾಡಿಲ್ಲ. ಅದರ ಅವಶ್ಯಕತೆನೂ ಯಾರಿಗೂ ಇಲ್ಲ ಅಂದರು.

ಉಡುಪಿ : ಬಸ್‌ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಮಾಲೀಕರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಚಾಲಕ, ನಿರ್ವಾಹಕ – vishwanews24

ಇನ್ನು ಬಿಜೆಪಿ ಶಾಸಕರೊಬ್ಬರ ಸಂಬಂಧಿ ದರ್ಶನ್ ಕೇಸ್ ಪ್ರಕರಣದಲ್ಲಿ ಭಾಗಿ ಎಂಬ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಇರಬಹುದೇನೋ ಗೊತ್ತಿಲ್ಲ. ಪಕ್ಷದ ಆಧಾರದ ಮೇಲೆ ಈ ಕೇಸ್ ನೊಡ್ತಾ ಇಲ್ಲ. ಒಂದು ವೇಳೆ ನಮ್ಮ ಪಕ್ಷದಲ್ಲಿ ಇದ್ದರೂ ತಪ್ಪಿತಸ್ಥರೇ. ಬೇರೆ ಪಕ್ಷದಲ್ಲಿ ಇದ್ದರೂ ತಪ್ಪಿತಸ್ಥರೇ. ಯಾರು ಏನು ತಪ್ಪು ಮಾಡಿದ್ದಾರೆ ಅದರ ಮೇಲೆ ಹೋಗುತ್ತದೆ ಅಂದರು.

ದರ್ಶನ್ ಸೇರಿ ನಾಲ್ಕು ಜನರನ್ನ ನಿನ್ನೆ ಒಂದು ವಾರ ಕಸ್ಟಡಿಗೆ ಕೇಳಿದ್ದರು. ಆದರೆ ಎರಡು ದಿನ ಕೊಟ್ಟಿದ್ದಾರೆ. ಅಷ್ಟರಲ್ಲಿ ವಿಚಾರಣೆ ಮುಗಿದ್ರೆ ನ್ಯಾಯಾಂಗದ ವಶಕ್ಕೆ ಕೊಡ್ತಾರೆ ಅಂತಾ ಪರಮೇಶ್ವರ್ ಹೇಳಿದರು.

ದರ್ಶನ್​ ಪರ ವಕೀಲರಾಗಿ ಫೇಮಸ್​ ಕ್ರಿಮಿನಲ್​ ಲಾಯರ್​​ ಸಿ.ವಿ ನಾಗೇಶ್​ ನೇಮಕ – vishwanews24

Leave a Reply