ದಾವಣಗೆರೆ ಮಹಾನಗರ ಪಾಲಿಕೆ: ಬಿಜೆಪಿ ಮಡಿಲಿಗೆ -Vishwanews24

Featured, ರಾಜ್ಯ ನ್ಯೂಸ್

ದಾವಣಗೆರೆ: ತೀವ್ರ ಕುತೂಹಲ ಕೆರಳಿದ್ದ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್‌ ಚುನಾವಣೆಯಲ್ಲಿ  ಕಾಂಗ್ರೆಸ್‌ ಪಕ್ಷದ ಸದಸ್ಯರು  ಸಭೆ ಬಹಿಷ್ಕರಿಸಿದ್ದರಿಂದ ಬಿಜೆಪಿಗೆ ಅಧಿಕಾರ ಚುಕ್ಕಾಣಿ ನಿರಾಯಾಸವಾಗಿ ದಕ್ಕಿದೆ.

ಒಟ್ಟು 62 ಸದಸ್ಯರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರಾದರೂ ಬಳಿಕ  ಕಾಂಗ್ರೆಸ್ ಪಕ್ಷದ ಸದಸ್ಯರು ಚುನಾವಣೆ ಬಹಿಷ್ಕರಿಸಿದ್ದರಿಂದ ಬಿಜೆಪಿಗೆ ಗೆಲುವು ಅನಾಯಾಸವಾಗಿ ಲಭಿಸಿತು.

ಸಾಮಾನ್ಯ ವರ್ಗಕ್ಕೆ ಮೀಸಲಾದ ಮೇಯರ್ ಸ್ಥಾನಕ್ಕೆ ಬಿ.ಜಿ. ಅಜಯ್ ಕುಮಾರ್ ಹಾಗೂ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲು ಆಗಿದ್ದ ಉಪಮೇಯರ್ ಸ್ಥಾನಕ್ಕೆ ಸೌಮ್ಯ ನರೇಂದ್ರ ಕುಮಾರ್ ಆಯ್ಕೆಯಾದರು.