ದುಬೈನಲ್ಲಿ ಭೀಕರ ರಸ್ತೆ ಬಸ್‌ ಅಪಘಾತ : 8 ಭಾರತೀಯರು ಸೇರಿ 17 ಮಂದಿ ಸಾವು -Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ದುಬೈ : ರಂಜಾನ್ ಹಬ್ಬದ ರಜೆ ಮುಗಿಸಿ ಓಮನ್ ನಿಂದ ದುಬೈಗೆ  ತೆರಳುತ್ತಿದ್ದ ಬಸ್  ಸಂಯುಕ್ತ ಅರಬ್ ರಾಷ್ಟ್ರದಲ್ಲಿ ರಸ್ತೆ ಸೂಚನ ಫಲಕಕ್ಕೆ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಎಂಟು ಮಂದಿ ಭಾರತೀಯರು ಎಂದು ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿದೆ.

ಘಟನೆಯಲ್ಲಿ ಸಾವನ್ನಪ್ಪಿರುವ 17 ಮಂದಿಯಲ್ಲಿ 8 ಜನ ಭಾರತೀಯರು ಎನ್ನಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ದುಬೈನ ಭಾರತೀಯ ರಾಯಭಾರಿ ಘಟನೆಯಲ್ಲಿ ಸತ್ತವರ ಸಂಖ್ಯೆಯನ್ನು ಖಚಿತಪಡಿಸಿದ್ದಾರೆ. ಮೃತಪಟ್ಟವರ ಸಂಬಂಧಿಕರ ಸಂಪರ್ಕದಲ್ಲಿ ಇರುವುದಾಗಿ ತಿಳಿಸಿದ್ದಾರೆ. ಇನ್ನು ಘಟನೆ ಕುರಿತು ದುಬೈ ಪೊಲೀಸರು ಟ್ವೀಟ್ ಮಾಡಿದ್ದಾರೆ. ಬಸ್ ನಲ್ಲಿ 31 ಜನರು ಪ್ರಯಾಣಿಸುತ್ತಿದ್ದರು. ಮೆಟ್ರೋ ಸ್ಟೇಷನ್ ಬಳಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ಮೃತ ಭಾರತೀಯರನ್ನು ರಾಜಗೋಪಾಲನ್, ಫೆರೋಜ್ ಖಾನ್ ಪಠಾಣ್, ರೇಶ್ಮಾ ಫೆರೊಜ್ ಖಾನ್ ಪಠಾಣ್, ದೀಪಕ್ ಕುಮಾರ್, ಜಮಾಲುದ್ದೀನ್ ಅರಕ್ಕವೀಟ್ಟಿಲ್, ಕಿರಣ್ ಜಾನ್ನಿ, ವಾಸುದೇವ್ ಮತ್ತು ತಿಲಕ್ರಾಮ್ ಜವಾಹರ್ ಠಾಕೂರ್ ಎಂದು ಗುರುತಿಸಲಾಗಿದೆ.