ದುಬೈನಲ್ಲಿ ಮತ್ತೆ ಮಳೆರಾಯನ ಆರ್ಭಟ; ಜನಜೀವನ ಅಸ್ತವ್ಯಸ್ತ , ವಿಮಾನ ಸಂಚಾರ ಸ್ಥಗಿತ – Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ದುಬೈನಲ್ಲಿ ಮತ್ತೆ ಮಳೆರಾಯನ ಆರ್ಭಟ; ಜನಜೀವನ ಅಸ್ತವ್ಯಸ್ತ , ವಿಮಾನ ಸಂಚಾರ ಸ್ಥಗಿತ

ದುಬೈ: ಎರಡು ವಾರಗಳ ಹಿಂದೆ UAE ದುಬೈಯಲ್ಲಿ ಧಾರಾಕಾರ ಮಳೆಯಾಗಿತ್ತು. ಆ ರಣ ಭೀಕರ ಮಳೆಯಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಅಲ್ಲಿನ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ನೋಡ ನೋಡುತ್ತಿದ್ದಂತೆ ಮಳೆ ದೊಡ್ಡ ಅವಾಂತರವನ್ನೇ ಸೃಷ್ಟಿಸಿತ್ತು.

ಎರಡು ವಾರಗಳ ನಂತರ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನಾದ್ಯಂತ ಮತ್ತೆ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಬ್ರಹ್ಮಾವರ : ಯುವಕನಿಗೆ ಲೈಂಗಿಕ ಕಿರುಕುಳ ; ಆರೋಪಿ ವಾಸ್ತುತಜ್ಞ ಅನಂತ ನಾಯ್ಕ ಬಂಧನ – Vishwanews24

ಗುರುವಾರ ಮುಂಜಾನೆ 3 ಗಂಟೆ ಸುಮಾರಿಗೆ ದುಬೈನಲ್ಲಿ ರಣಭೀಕರ ಗಾಳಿ, ಗುಡುಗು ಸಹಿತ ಮಿಂಚು ಕಾಣಿಸಿಕೊಂಡಿತ್ತು. ಹೀಗಾಗಿ ಒಂದು ಗಂಟೆಯ ನಂತರ, ದೇಶದ ಹವಾಮಾನ ಇಲಾಖೆಯು ಅಲರ್ಟ್ ಅನ್ನು ನೀಡಿದೆ. ಮೇ 3ರವರೆಗೆ ಭಾರೀ ಮಳೆಯಾಗಲಿದೆ. ಹೀಗಾಗಿ ಅಲ್ಲಿನ ನಿವಾಸಿಗಳಿಗೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿ. ಜೊತೆಗೆ ವಿಮಾನಗಳಲ್ಲಿ ಪ್ರಯಾಣಿಸುವ ಭಾರತೀಯರಿಗೆ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚನೆಯೊಂದನ್ನು ನೀಡಿದೆ.

ಸುರತ್ಕಲ್: ಟೋಲ್ ಗೇಟ್‌ ಗೆ ಮುತ್ತಿಗೆ ಹಾಕಿದ ಪ್ರಕರಣ; 101 ಜನರಿಗೆ ಸಮನ್ಸ್ – Vishwanews24

Leave a Reply