ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತ : ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು – Vishwanews24

Featured, ದಕ್ಷಿಣ ಕನ್ನಡ

ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತ : ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು

ಮಂಗಳೂರು: ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ವಿಮಾನ ನಿಲ್ದಾಣದಲ್ಲಿ ಮೃತಪಟ್ಟ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮುಕ್ಕ ನಿವಾಸಿ ಮುಹಮ್ಮದ್ (65) ಮೃತ ದುರ್ದೈವಿ.

ಮಹಮ್ಮದ್ ಅವರ ಪತ್ನಿ ದುಬೈನಲ್ಲಿರುವ ಮಗಳ ಬಳಿ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಲು ಗುರುವಾರ ದುಬೈಗೆ ತೆರಳಿ ಭಾನುವಾರ ಹಿಂದಿರುಗುತ್ತಿದ್ದರು ಎಂದು ತಿಳಿದು ಬಂದಿದೆ.

ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಶೋಭಾಯಾತ್ರೆ : ಅ.5 ರಿಂದ ಬದಲಿ ವ್ಯವಸ್ಥೆ – Vishwanews24

ದುಬೈನಿಂದ ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ್ದ ಅವರು ಎಮಿಗ್ರೇಶನ್ ವಿಭಾಗದಲ್ಲಿ ನಿರ್ಗಮನದ ಸಹಿ ಹಾಕಲು ಅಧಿಕಾರಿಗಳಿಗೆ ಪಾಸ್ ಪೋರ್ಟ್ ನೀಡಿ ನಿಂತಿದ್ದ ವೇಳೆ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣ ವಿಮಾನ ನಿಲ್ದಾಣದ ಆಯಂಬುಲೆನ್ಸ್ ಮೂಲಕ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮುಹಮ್ಮದ್ ಅವರು ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದರು ಎಂದು ಅವರ ಸಹೋದರಿಯ ಪತಿ ಶರೀಫ್ ಅವರು ಮಾಹಿತಿ ನೀಡಿದ್ದಾರೆ.

Leave a Reply