ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಪ್ರವಾಸಿಗರ ಮೋಜು ಮಸ್ತಿ – vishwanews24
ದೇವರಮನೆ, ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಪ್ರವಾಸಿಗರ ಮೋಜು ಮಸ್ತಿ: ಸಂಚಾರಕ್ಕೆ ಸಮಸ್ಯೆ
ಚಿಕ್ಕಮಗಳೂರು: ಮಲೆನಾಡ ತಪ್ಪಲಿನಲ್ಲಿರುವ ದೇವರಮನೆ ಕ್ಷೇತ್ರಕ್ಕೆ ಈ ಸಮಯದಲ್ಲಿ ಅಂದರೆ ಮಾನ್ಸೂನ್ ಸಮಯದಲ್ಲಿ ಪ್ರವಾಸಿಗರು ಹೆಚ್ಚಾಗಿ ಬರುತ್ತಾರೆ. ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರ 9 ಗುಡ್ಡಗಳ ನಡುವೆ ನೆಲೆಸಿದ್ದಾನೆ. ಆದರೆ ಇಂತಹ ಪ್ರವಾಸಿ ತಾಣಗಳು ಕೆಲ ಪ್ರಾವಾಸಿಗರ ಹುಚ್ಚಾಟ್ಕಕ್ಕೆ ತುತ್ತಾಗುತ್ತಿದೆ.
ಇದೀಗ ಶ್ರೀ ಕ್ಷೇತ್ರ ದೇವರಮನೆ ಪ್ರದೇಶದಲ್ಲಿರುವ ಕಾಲಭೈರವೇಶ್ವರನ ಕ್ಷೇತ್ರದಲ್ಲಿ ಪ್ರವಾಸಿಗರು ರಸ್ತೆ ಮಧ್ಯ ವಾಹನಗಳನ್ನು ನಿಲ್ಲಿಸಿ ಹುಚ್ಚಾಟ ಮೆರೆಯುತ್ತಿದ್ದಾರೆ ಇದರಿಂದ ಕಾಲಭೈರವೇಶ್ವರನ ಕ್ಷೇತ್ರಕ್ಕೆ ಬರುವ ಭಕ್ತರಿಗೂ ಇರುಸು ಮುರಿಸು ಆಗುತ್ತಿದೆ.
ಬೆಂಗಳೂರಿನಲ್ಲಿ ಡೆಂಗ್ಯೂ ಅಬ್ಬರ : ಚಿಕಿತ್ಸೆ ಫಲಿಸದೇ ಯುವಕ ಸಾವು – vishwanews24
ಒಂದು ಕಡೆ ಎಣ್ಣೆ ಹಾಕ್ಕೊಂಡ್, ಧಮ್ ಹೊಡ್ಕೊಂಡ್ ರಸ್ತೆ ಮಧ್ಯೆ ಮೋಜು ಮಸ್ತಿ ಮಾಡುತ್ತಿರುವ ಪ್ರವಾಸಿಗರು, ಇನ್ನೊಂದೆಡೆ ವಾಹನಗಳು ಓಡಾಡಲು ಜಾಗವಿಲ್ಲದಂತೆ ರಸ್ತೆ ಮಧ್ಯೆ ಕಾರು ನಿಲ್ಲಿಸಿ ಹುಚ್ಚಾಟ ಮೆರೆಯುತ್ತಿದ್ದಾರೆ.
ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಐವರು ನೀರು ಪಾಲು -vishwanews24
