ದೇಶದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೇಸ್ ನಿಂದ ದೇಶ್ ಕಿ ಬಾತ್ ಕಾರ್ಯಕ್ರಮ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ ಗೆ ಪ್ರತಿಯಾಗಿ ಕಾಂಗ್ರೆಸ್ ದೇಶ್ ಕಿ ಬಾತ್ ಕಾರ್ಯಕ್ರಮವನ್ನು ಇಂದಿನಿಂದ ನಡೆಸಲಿದ್ದು ಸೋಷಿಯಲ್ ಮೀಡಿಯಾಗಳ ಮೂಲಕ ನೇರ ಪ್ರಸಾರ ಮಾಡಲು ಉದ್ದೇಶಿಸಿದೆ.

ಕಾರ್ಯಕ್ರಮದ ಬಗ್ಗೆ ಮಾತನಾಡಿರುವ ಕಾಂಗ್ರೆಸ್​ ಸಾಮಾಜಿಕ ಜಾಲತಾಣ ಮುಖ್ಯಸ್ಥ ರೋಹನ್​ ಗುಪ್ತಾ, ದೇಶ್​ ಕಿ ಬಾತ್​ ಕಾರ್ಯಕ್ರಮವು ಸಾಮಾನ್ಯ ವ್ಯಕ್ತಿಯ ಕಳವಳವನ್ನು ಪರಿಹರಿಸುವ ಪ್ರಯತ್ನ ಮಾಡಲಿದೆ. ಈಡೇರದ ಭರವಸೆ, ನಿರುದ್ಯೋಗ, ಆರ್ಥಿಕ ಪರಿಸ್ಥಿತಿ, ಅಪರಾಧ, ಕೃಷಿ ಬಿಕ್ಕಟ್ಟು ಹಾಗೂ ಏರುತ್ತಿರುವ ಬೆಲೆ ಮುಂತಾದ ಪ್ರಮುಖ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಜನರ ಪರವಾಗಿ ನಾವು ಕಾರ್ಯಕ್ರಮದ ಮೂಲಕ ಧ್ವನಿ ಎತ್ತಲಿದ್ದೇವೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಕಾಂಗ್ರೆಸ್ ನ ಸೋಷಿಯಲ್ ಮೀಡಿಯಾ ಮುಖ್ಯಸ್ಥ ರೋಹನ್ ಗುಪ್ತಾ, ದೇಶದ ಸಾಮಾನ್ಯ ಜನತೆಯ ಸಮಸ್ಯೆಗಳನ್ನು ಮತ್ತು ಸರ್ಕಾರದ ವೈಫಲ್ಯಗಳನ್ನು, ಈಡೇರಿಸದಿರುವ ಭರವಸೆಗಳನ್ನು ಮತ್ತು ಪ್ರಮುಖ ಸಾರ್ವಜನಿಕ ಸಮಸ್ಯೆಗಳನ್ನು ದೇಶ್ ಕಿ ಬಾತ್ ನಲ್ಲಿ ಚರ್ಚೆ ನಡೆಸಲಾಗುವುದು ಎಂದಿದ್ದಾರೆ.

ಇತ್ತೀಚಿನ ವಿಧಾನಸಭಾ ಚುನಾವಣೆ ಫಲಿತಾಂಶದಿಂದ ಜನರ ತೀರ್ಪು ಏನೆಂಬುದು ಸ್ಪಷ್ಟವಾಗಿದೆ. ಜನರ ಸಮಸ್ಯೆಗಳನ್ನು ಬಗೆಹರಿಸಬೇಕು. ಜವಾಬ್ದಾರಿಯುತ ವಿರೋಧಪಕ್ಷವಾಗಿ ಕಾಂಗ್ರೆಸ್ ದೇಶದ ಜನರು ಎದುರಿಸುತ್ತಿರುವ ವಾಸ್ತವ ಸಮಸ್ಯೆಗಳನ್ನು ದೇಶ್ ಕಿ ಬಾತ್ ನಲ್ಲಿ ಚರ್ಚಿಸಲಿದೆ. ಆದರೆ ಮಾಧ್ಯಮಗಳು ಈ ವಿಷಯಗಳನ್ನು ಜನರಿಗೆ ತಲುಪಿಸಬೇಕು.

ಅದರ ಮೊದಲ ಅವತರಣಿಕೆ ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು ಪಕ್ಷದ ವಕ್ತಾರ ಪವನ್ ಖೆರಾ ನಡೆಸಿಕೊಡಲಿದ್ದಾರೆ.