ದೇಶದಲ್ಲಿ ನಾನು ಇರಬೇಕು , ಇಲ್ಲ ಭಯೋತ್ಪಾದಕರು ಇರಬೇಕು : ಕೇಂದ್ರ ಸಚಿವ ಅಮಿತ್‌ ಶಾ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ : ಕಾಶ್ಮೀರದಲ್ಲಿ ಸೈನಿಕರಿಗೆ ಕಲ್ಲು ಹೊಡೆಯುವವರನ್ನು ಮಟ್ಟ ಹಾಕುವುದಕ್ಕೆ ಕೇಂದ್ರ ಸಚಿವ ಅಮಿತ್‌ ಶಾ ಅವರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ತಮ್ಮ ಅಧಿಕಾರವನ್ನು ಸ್ವೀಕಾರ ವಹಿಸಿಕೊಂಡ ಮೊದಲ ದಿವಸವೇ ನಡೆದ  ಗೃಹ ಇಲಾಖೆಯ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ದೇಶದಲ್ಲಿ ನಾನು ಇರಬೇಕು , ಇಲ್ಲ ಭಯೋತ್ಪಾದಕರು ಇರಬೇಕು ಅಂತ ಹೇಳಿದ್ದಾರೆ .

ಇದಲ್ಲದೇ ದೇಶದ ಗಡಿಯಲ್ಲಿ ಅಕ್ರಮವಾಗಿ ನುಸುಳುತ್ತಿರುವ ಬಾಂಗ್ಲಾ ದೇಶದ ನಿವಾಸಿಗಳಿಗೂ ಕೂಡ ಇದು ಎಚ್ಚರಿಕೆ ಘಂಟೆಯಾಗಿದ್ದು, ದೇಶದ ಭದ್ರತೆ ವಿಚಾರದಲ್ಲಿ ಯಾವುದೇ ರಾಜೀಗೂ ನಾವು ಸಿದ್ದರಿಲ್ಲ ಅಂತ ಸ್ಪಷ್ಟವಾಗಿ ಹೇಳಿದ್ದು, ಉಗ್ರಗಾಮಿ ಸಂಘಟನೆಗಳಿಗೆ ಸಂಬಂಧಪಟ್ಟ ಫೈಲ್‌, ನಕ್ಸಲರು ಹಾಗೂ ಕಾಶ್ಮೀರದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮುಂದಾಗಿರುವ ಸೈನಿಕರ ಮೇಲೆ ಕಲ್ಲು ಎಸೆಯುವವರ ವಿರುದ್ದ ಯಾವೆಲ್ಲ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು, ಇದಲ್ಲದೇ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸವತ್ತು ಗಳನ್ನು ಹೇಗೆ ವಾಪಸ್ಸು ತೆಗೆದುಕೊಳ್ಳಬೇಕು ಎನ್ನುವುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎನ್ನಲಾಗಿದೆ.