ದೇಶದಲ್ಲಿ ಮುಂದೆ ಏಕರೂಪದ ನಾಗರಿಕ ಕಾನೂನು ಜಾರಿಗೆ ತರುತ್ತದೆ  : ಕೋಟ ಶ್ರೀನಿವಾಸ ಪೂಜಾರಿ – Vishwnaews24

Featured, ರಾಜ್ಯ ನ್ಯೂಸ್

ದೇಶದಲ್ಲಿ ಮುಂದೆ ಏಕರೂಪದ ನಾಗರಿಕ ಕಾನೂನು ಜಾರಿಗೆ ತರುತ್ತದೆ  : ಕೋಟ ಶ್ರೀನಿವಾಸ ಪೂಜಾರಿ

ಕೊಪ್ಪಳ : ದೇಶದಲ್ಲಿ ಇಂದಲ್ಲ. ನಾಳೆ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ಬರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕುಕನೂರಿನಲ್ಲಿ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಣಿಯಲ್ಲಿ ಏಕರೂಪ ನಾಗರಿಕ ಕಾನೂನು ಜಾರಿ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ದೇಶದಲ್ಲಿ ಇಂದಲ್ಲ, ನಾಳೆ ಸಮಾನ ನಾಗರಿಕತೆ ತಂದೇ ತರುತ್ತದೆ.

ಬಿಜೆಪಿ ನೇತೃತ್ವದ ಸರ್ಕಾರ ಏನು ಹೇಳಿದೆ ಅದನ್ನೇ ಮಾಡಿದೆ. ಮುಂದೆ ಏಕರೂಪದ ನಾಗರಿಕ ಕಾನೂನು ಜಾರಿಗೆ ತರುತ್ತದೆ ಎಂದು ತಿಳಿಸಿದ್ದಾರೆ.

ದೇಶದ ಎಲ್ಲಾ ನಾಗರಿಕರಿಗೂ ಒಂದೇ ರೀತಿಯ ಕಾನೂನು ಇರಬೇಕು ಎಂಬುದು ಬಿಜೆಪಿಯ ನಿಲುವಾಗಿದೆ. ಬಹುಕಾಲದಿಂದ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಲೇ ಬಂದಿದೆ. ಹೀಗಾಗಿ ದೇಶದಲ್ಲಿ ಏಕ ರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ತರುತ್ತೇವೆ ಎಂದರು.

`CET’  ಪರೀಕ್ಷೆಗೆ ಹಾಜರಾಗುವವರು ಹಿಜಾಬ್ ಧರಿಸುವಂತಿಲ್ಲ: `KEA’ ಸ್ಪಷ್ಟನೆ – Vishwanews24

Leave a Reply