ದ್ವೇಷ ಭಕ್ತರನ್ನು ದೇಶ ಬಿಟ್ಟು ಹೋಗಿ ಎಂದು ಕರೆ ಕೊಡಬೇಕಿದೆ : ಬಿ.ಕೆ. ಹರಿಪ್ರಸಾದ್ – Vishwanews24

Featured, ರಾಜ್ಯ ನ್ಯೂಸ್

ದ್ವೇಷ ಭಕ್ತರನ್ನು ದೇಶ ಬಿಟ್ಟು ಹೋಗಿ ಎಂದು ಕರೆ ಕೊಡಬೇಕಿದೆ : ಬಿ.ಕೆ. ಹರಿಪ್ರಸಾದ್ 

ಬೆಂಗಳೂರು: ದ್ವೇಷ ಭಕ್ತರನ್ನು ದೇಶ ಬಿಟ್ಟು ಹೋಗಿ ಎಂದು ಕರೆ ಕೊಡಬೇಕಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಇದು ಮಹತ್ವದ ದಿನವಾಗಿದೆ. ಆದರೆ, ಇಂದು ನಕಲಿ ದೇಶಭಕ್ತರು ಕಾಂಗ್ರೆಸ್ ಹಾಗೂ ಭಾರತೀಯರಿಗೆ ದೇಶಭಕ್ತಿಯ ಪಾಠ ಮಾಡುತ್ತದೆ. ಆರ್ ಎಸ್ ಎಸ್ ನಾಯಕರು ಈ‌ ಹೋರಾಟದಲ್ಲಿ‌ ಭಾಗಿಯಾಗಿರಲಿಲ್ಲ ಎಂದರು.

ಆರ್ ಎಸ್ ಎಸ್ ಸ್ಥಾಪಕ ಹೆಡ್ಗೆವಾರ್ ಹಾಗೂ ಗೋಲ್ವಳ್ಕರ್ ಈ‌ ಹೋರಾಟದಲ್ಲಿ ಇರಲಿಲ್ಲ. ಶಾಮ್ ಪ್ರಸಾದ್ ಮುಖರ್ಜಿ ಕ್ವಿಟ್ ಇಂಡಿಯಾ ಹೋರಾಟ ಯಶಸ್ವಿ‌ ಆಗಲು ಬಿಡದಂತೆ ಬ್ರಿಟಿಷರಿಗೆ ಪತ್ರವನ್ನು ಬರೆದಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ‌ ಕೊಡುಗೆ ಇದ್ದದ್ದು ಕಾಂಗ್ರೆಸ್ ಪಕ್ಷದ್ದು ಮಾತ್ರ ಎಂದು ಹೇಳಿದರು.

ಬೈಂದೂರು: ಬಾಲಕಿ ನೀರುಪಾಲು : ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ..

ಮೋದಿ ಭಕ್ತರು 2014 ಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಎಂದು ಪರೋಕ್ಷವಾಗಿ ಹೇಳುತ್ತಾರೆ. ಆರ್ ಎಸ್ ಎಸ್ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸದವರು ನಮಗೆ ತಿರಂಗದ ಪಾಠ ಮಾಡುತ್ತಾರೆ ಎಂದು ಕಿಡಿಕಾರಿದರು. ಸ್ವಾತಂತ್ರ್ಯಕ್ಕೆ, ಸಂವಿಧಾನಕ್ಕೆ ಬಿಜೆಪಿಯಿಂದ ಯಾವುದೇ ಕೊಡುಗೆ ಇಲ್ಲ. ಈ ನಿಟ್ಟಿನಲ್ಲಿ ದ್ವೇಷ ಭಕ್ತರನ್ನು ದೇಶ ಬಿಟ್ಟು ಹೋಗಿ ಎಂದು ಕರೆ ಕೊಡಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಚಿವ ಕೆ.ಜೆ ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕ‌ ರಿಜ್ವಾನ್ ಅರ್ಷದ್ ಭಾಗಿಯಾಗಿದ್ದರು.

Leave a Reply