ಧರ್ಮಸ್ಥಳ: ಕಂಬಳ ವೀರ ಶ್ರೀನಿವಾಸ ಗೌಡರಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಂದ ಗೌರವ -Vishwanews24
ಧರ್ಮಸ್ಥಳ: ಕಂಬಳ ವೀರ ಮೂಡಬಿದಿರೆ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಅವರಿಗೆ ನಾಡಿನಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಸೋಮವಾರ ಶ್ರೀನಿವಾಸ ಗೌಡ ಅವರು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶಿರ್ವಾದ ಪಡೆದರು.
ಈ ಸಂಧರ್ಭದಲ್ಲಿ ಹೆಗ್ಗಡೆಯವರು ತುಳುನಾಡಿನ ಕಂಬಳ ಕ್ರೀಡೆಯಲ್ಲಿ ಸಾಧನೆಗೈದು ವಿಶ್ವವಿಖ್ಯಾತಿ ಪಡೆದ ಶ್ರೀನಿವಾಸ ಗೌಡ ಅವರಿಗೆ ಅಭಿನಂದನೆ ಸಲ್ಲಿಸಿ, ಕಂಬಳ ಕೂಟದಲ್ಲಿ ಇನ್ನಷ್ಟು ಸಾಧನೆಗಳು ಹೊರಹೊಮ್ಮಲಿ ಅಂತ ಶುಭ ಹಾರೈಸಿ ಗೌರವಿಸಿದರು.
ಈ ವೇಳೆ ಮಾಜಿ ಶಾಸಕ ಅಭಯಚಂದ್ರ ಜೈನ್, ಇರುವೈಲು-ಪಾಣಿಲ ಕೋಣದ ಯಜಮಾನ ಸತೀಶ್ಚಂದ್ರ, ಮಂಗಳೂರು ಎಪಿಎಂಸಿ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್, ಕಲ್ಲಬೆಟ್ಟು ವ್ಯ.ಸೇ. ಸ. ಸಂಘ ನಿರ್ದೇಶಕ ಚಿಂತನ್ ಲೋಬೋ, ಕಂಬಳ ಅಕಾಡೆಮಿ ನಿರ್ದೇಶಕರಾದ ಜ್ವಾಲ ಪ್ರಸಾದ್, ಸುಭಾಶ್ಚಂದ್ರ ಚೌಟ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಕ್ರೀಡಾ ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು
