ಧರ್ಮಸ್ಥಳ ಪ್ರಕರಣ: ಮುಂದುವರೆದ ಶೋಧ ಕಾರ್ಯ – vishwanews24

Featured, ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣ: ಮುಂದುವರೆದ ಕಾರ್ಯಾಚರಣೆ 

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪರಿಸರದಲ್ಲಿ ಶವ ಕಳೆಬರ ಹುಡುಕುವ ಕಾರ್ಯ ಮುಂದುವರೆದಿದೆ. ಎರಡನೇ ದಿನ ದೂರುದಾರ ಗುರುತಿಸಿರುವ ಎರಡನೇ ಪಾಯಿಂಟ್ ನಲ್ಲಿ ಎಸ್ ಐಟಿ ತಂಡ ಶೋಧ ಕಾರ್ಯ ಮುಂದುವರೆಸಿದೆ.

ಇಂದು ಸುಮಾರು 11ಗ‌ಂಟೆಯ ಸುಮಾರಿಗೆ ಸಾಕ್ಷಿ ದೂರುದಾರನೊಂದಿಗೆ ಎಸ್‌.ಐ.ಟಿ ತಂಡ ನೇತ್ರಾವತಿ ಸ್ನಾನಘಟ್ಟಕ್ಕೆ ಆಗಮಿಸಿದೆ. 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ತನ್ನ ವಕೀಲರ ಜೊತೆ ಆಗಮಿಸಿದ್ದು ಕಚೇರಿಯ ಪ್ರಕ್ರಿಯೆಗಳನ್ನು ಮುಗಿಸಿ ತಂಡ ನೇತ್ರಾವತಿ ಸ್ನಾನಘಟ್ಟಕ್ಕೆ ತಲುಪಿದೆ.

ಆಗಸ್ಟ್‌ 1ರಿಂದ ಹೊಸ ಯುಪಿಐ ನಿಯಮಗಳು ಜಾರಿ : ಹಲವು ಬದಲಾವಣೆ – vishwanews24

ಇಂದು ಆತ ಗುರುತಿಸಿದ ಎರಡನೆಯ ಸ್ಥಳದಲ್ಲಿ ಅಗೆಯಲು ಸಿದ್ದತೆ ನಡೆಸುತ್ತಿದ್ದಾರೆ. ಇಂದು ಅಗೆಯಲಿರುವ ಪ್ರದೇಶ ಅರಣ್ಯ ಇಲಾಖೆಗೆ ಸೇರಿದ ಜಾಗವಾಗಿರುವುದಾಗಿ ತಿಳಿದು ಬಂದಿದ್ದು, ಇಲ್ಲಿ ಹಿಟಾಚಿ ಬಳಕೆಗೆ ಅರಣ್ಯ ಇಲಾಖೆಯ ಅನುಮತಿಯಿಲ್ಲ. ಅರಣ್ಯ ಕಾನೂನುಗಳು ಹಿಟಾಚಿ ಬಳಕೆಗೆ ವಿರುದ್ದವಾಗಿದ್ದು ಈ ಕಾರಣದಿಂದಾಗಿ ಕಾರ್ಮಿಕರನ್ನು ಉಪಯೋಗಿಸಿ ಅಗೆಯುವ ಕಾರ್ಯ ನಡೆಯಲಿದೆ.

ಇನ್ನು ದೂರುದಾರ ಎಸ್ಐಟಿ ತಂಡದ ಎದುರು ಈ ಹಿಂದೆ ಧರ್ಮಸ್ಥಳದಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಹೆಸರನ್ನು ಹೇಳಿದ್ದ ಎಂದು ವರದಿಯಾಗಿದ್ದು, ಎಸ್ಐಟಿ ಟೀಮ್ ಈ ಕುರಿತಂತೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಲಾಗಿದೆ.

ಉಡುಪಿ:  ರಾಜ್ಯದಲ್ಲಿ ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಯಶ್ಪಾಲ್ ಸುವರ್ಣ ಮನವಿ – vishwanews24

Leave a Reply