ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ  : ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ – vishwanews24

Featured, ರಾಜ್ಯ ನ್ಯೂಸ್

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ  : ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ ನೀಡಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಟಲ್‌ ಮಾಧ್ಯಮದಲ್ಲಿ  ಹರಿದಾಡುತ್ತಿರುವ ಉಹಾಪೋಹದ ಸುದ್ದಿಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್‌ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧ ಇಲ್ಲದ ಇರುವ ಇಲ್ಲಸಲ್ಲದ ಪೋಸ್ಟ್‌ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಮೃತದೇಹ ಹೂತು ಹಾಕಿದ ಪ್ರಕರಣ : ಐದನೇ ದಿನದ ಕಾರ್ಯಾಚರಣೆಗೆ ಬಂದ ಎಸ್.ಐ.ಟಿ ತಂಡ – vishwanews24

ಹೇಟ್‌ ಸ್ಪೀಚ್‌ ಬಗ್ಗೆ ಕಾನೂನು ಮಾಡಿದ ನಂತರ ದಕ್ಷಿಣ ಕನ್ನಡದಲ್ಲಿ ದ್ವೇಷ ಭಾಷಣದ  ಈಗ ಕಡಿಮೆಯಾಗಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಾದರೂ ದ್ವೇಷದ ಪೋಸ್ಟ್‌ ಹಾಕಿದರೆ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕ್ರಮ ಕೈಗಳ್ಳುತ್ತೇವೆ ಎಂದು ತಿಳಿಸಿದರು.

ಧರ್ಮಸ್ಥಳ ಪ್ರಕರಣ ತನಿಖೆ ನಡೆಯುತ್ತಿದೆ. ತನಿಖಾ ತಂಡ ವರದಿ ಸಲ್ಲಿಸುವವರೆಗೆ ನಾವು ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದರು.

ಫೇಕ್ ಸುದ್ದಿಗಳ ಮೇಲೆ ಹದ್ದಿನ ಕಣ್ಣಿಡಲು ಸರ್ಕಾರ ಈಗ ಮುಂದಾಗಿದ್ದು ವಿಧಾನಸೌಧದಲ್ಲಿ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಈಗ ಮಹತ್ವದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ಡಿಜಿಪಿ ಪ್ರಣಬ್ ಮೊಹಂತಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಮುರುಗನ್, ಶರತ್ ಚಂದ್ರ ಸೇರಿದಂತೆ ಹಲವು ಮಂದಿ ಭಾಗಿಯಾಗಿದ್ದಾರೆ.

ಬಂಟ್ವಾಳ: ಜನಪರವಾದ ಅನೇಕ ಯೋಜನೆಗಳನ್ನು ಆರಂಭ ಮಾಡಿದ್ದೇ ಕಾಂಗ್ರೇಸ್ ಪಕ್ಷ : ರಮಾನಾಥ ರೈ – vishwanews24

Leave a Reply