ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ವಿರುದ್ದ ಯಾವುದೇ ರೀತಿಯ ಅವಹೇಳನಕಾರಿ ವರದಿ ಮಾಡದಂತೆ ಮಾಧ್ಯಮಗಳಿಗೆ ಕೋರ್ಟ್ ತಡೆಯಾಜ್ಞೆ – Vishwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ವಿರುದ್ದ ವರದಿ ಮಾಡದಂತೆ ಮಾಧ್ಯಮಗಳಿಗೆ ಕೋರ್ಟ್ ತಡೆಯಾಜ್ಞೆ

ಬೆಂಗಳೂರು  : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ರೀತಿಯ ಅವಹೇಳನಕಾರಿ ವರದಿ ಮಾಡದಂತೆ ಹಾಗೂ ಈಗಾಗಲೇ ಮಾಡಿರುವ ವರದಿಗಳನ್ನು ತೆಗೆದು ಹಾಕುವಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ. ಈ ಸಂಬಂಧ ವಾದಿಗಳಾದ ಶೀನಪ್ಪ ಮತ್ತಿತರರು ಸಲ್ಲಿಸಿರುವ ಅಸಲು ದಾವೆಯನ್ನು ಸಿಸಿಎಚ್‌–11ನೇ ನ್ಯಾಯಾಲಯ ವಿಚಾರಣೆ ನಡೆಸಿ ಇದೇ 19ರಂದು ಈ ಕುರಿತಂತೆ ಆದೇಶಿಸಿದೆ.

ಮಂಗಳೂರು : ಭಜರಂಗದಳದ ಮೂವರಿಗೆ ಗಡಿಪಾರು ನೋಟಿಸ್- ಸರ್ಕಾರದ ವಿರುದ್ದ ಹಿಂದೂ ಸಂಘಟನೆಗಳು ಆಕ್ರೋಶ – Vishwanews24

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಡೆಸುತ್ತಿರುವಂತಹ ಸಂಸ್ಥೆಗಳು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸ್‌ ಆ್ಯಪ್‌, ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌, ಯೂ–ಟ್ಯೂಬ್‌, ಟಿ.ವಿ.ಚಾನೆಲ್‌ ಹಾಗೂ ಇತರೆ ಯಾವುದೇ ರೀತಿಯ ಮಾಧ್ಯಮ ಪ್ರಕಾರಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ವರದಿ ಅಥವಾ ಮಾತನಾಡಬಾರದು‘ ಎಂದು ನಿರ್ಬಂಧಿಸಿ ಆದೇಶಿಸಿದೆ.

ಪಕ್ಷ ಅವಕಾಶ ನೀಡಿದರೆ ಲೋಕಸಭೆಗೆ ಸ್ಪರ್ಧಿಸಲು ಸಿದ್ಧ: ಪ್ರಮೋದ್‌ ಮಧ್ವರಾಜ್‌ – Vishwanews24

Leave a Reply