ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ, ನಟ ರಣಬೀರ್ ಕಪೂರ್ ವಿರುದ್ಧ ದೂರು ದಾಖಲು – vishwanews24

Featured, ರಾಷ್ಟ್ರ ನ್ಯೂಸ್

ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ, ನಟ ರಣಬೀರ್ ಕಪೂರ್ ವಿರುದ್ಧ ದೂರು ದಾಖಲು

ಮುಂಬೈ : ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಬಾಲಿವುಡ್ ನಟ ರಣಬೀರ್ ಕಪೂರ್ ಹಾಗೂ ಅವರ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಲಾಗಿದೆ.

ನಟ ರಣಬೀರ್ ಕಪೂರ್, ನಟಿ ಆಲಿಯಾ ಭಟ್ ಹಾಗೂ ಅವರ ಕುಟುಂಬದ ಸದಸ್ಯರು ಕ್ರಿಸ್ಮಸ್ ಆಚರಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆದ ಬಳಿಕ ನಟ ಹಾಗೂ ಆತನ ಕುಂಟುಬಸ್ಥರ ವಿರುದ್ಧ ದೂರು ದಾಖಲಾಗಿದೆ.

ಸಂಜಯ್ ತಿವಾರಿ ಎಂಬುವವರು ನಟ ಹಾಗೂ ಆತನ ಕುಟುಂಬಸ್ಥರ ವಿರುದ್ಧ ತಮ್ಮ ವಕೀಲರಾದ ಆಶಿಶ್ ರಾಯ್ ಹಾಗೂ ಪಂಕಜ್ ಮಿಶ್ರಾ ಮೂಲಕ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಡಿಯೋದಲ್ಲಿ ಮದ್ಯ ಸುರಿದ ಕೇಕ್ ಮೇಲೆ ಬೆಂಕಿ ಹಚ್ಚಿ ‘ಜೈ ಮಾತಾ ದಿ’ ಎಂದು ಘೋಷಣೆ ಕೂಗಿದ್ದಾರೆ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ತುಮಕೂರು: ಮಧು ಬಂಗಾರಪ್ಪರ ಕಾರು ಅಪಘಾತ ; ಸಚಿವರು ಪ್ರಾಣಾಪಾಯದಿಂದ ಪಾರು..vishwanews24

ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಕೇಕ್ ಮೇಲೆ ಮದ್ಯ ಸುರಿದಿದ್ದು ನಟ ರಣಬೀರ್ ಕಪೂರ್ ಅವರು ಬೆಂಕಿ ಹಚ್ಚಿ ಬಳಿಕ ‘ಜೈ ಮಾತಾ ದಿ’ ಎಂದು ಘೋಷಣೆ ಕೂಗಿದ್ದಾರೆ. ಹಿಂದೂ ಧರ್ಮದಲ್ಲಿ ಇತರ ದೇವತೆಗಳನ್ನು ಆವಾಹನೆ ಮಾಡುವ ಮುನ್ನ ಅಗ್ನಿ ದೇವರನ್ನು ಆವಾಹನೆ ಮಾಡುವ ಸಂಪ್ರದಾಯವಿದೆ. ಆದರೆ ನಟ ಹಾಗೂ ಅವರ ಕುಟುಂಬ ಸದಸ್ಯರು ಇತರ ಧರ್ಮದ ಹಬ್ಬವನ್ನು ಆಚರಣೆ ಮಾಡುವಾಗ ಉದ್ದೇಶಪೂರ್ವಕವಾಗಿ ಮದ್ಯ ಸೇವಿಸಿ ‘ಜೈ ಮಾತಾ ದಿ’ ಎಂದು ಹೇಳಿದ್ದಾರೆ. ಇದರಿಂದ ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ದೂರು ನೀಡಿದ್ದಾರೆ.

ತಮಿಳು ನಟ, ರಾಜಕಾರಣಿ ‘ಕ್ಯಾಪ್ಟನ್’ ವಿಜಯಕಾಂತ್ ಇನ್ನಿಲ್ಲ – vishwanews24

Leave a Reply