ನನಗೆ ಜನಾಶೀರ್ವಾದ ಇಲ್ಲ, ಪುಣ್ಯಾತ್ಮ ರಾಹುಲ್ ಗಾಂಧಿ ಅಧಿಕಾರ ನೀಡಿದರು: ಕುಮಾರ ಸ್ವಾಮಿ

Featured, ರಾಜ್ಯ ನ್ಯೂಸ್
ನನಗೆ ಸರ್ಕಾರ ರಚಿಸಲು ಜನತೆಯ ಆಶೀರ್ವಾದ ಇಲ್ಲ. ಪುಣ್ಯಾತ್ಮ ರಾಹುಲ್‌ ಗಾಂಧಿ ಒಂದು ಅವಕಾಶ ಕೊಟ್ಟಿದ್ದಾರೆ ಎಂದು ಸಿಎಂ ಕುಮಾರ ಸ್ವಾಮಿ ಎಐಸಿಸಿ ಅಧ್ಯಕ್ಷರನ್ನು ಹಾಡಿ ಹೊಗಳಿದ್ದಾರೆ.
ರೈತ ಸಂಘಟನೆಗಳು ಹಾಗೂ ಪ್ರತಿನಿಧಿಗಳ ಜತೆಗೆ ವಿಧಾನಸೌಧದಲ್ಲಿ ಸುದೀರ್ಘ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿ ಪುಣ್ಯಾತ್ಮ. ನನಗೆ ಮುಖ್ಯಮಂತ್ರಿ ಆಗಲು ಅವಕಾಶ ಕಲ್ಪಿಸಿದರು’   ಹೀಗಾಗಿ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ರೈತರಿಗೆ ಇದೊಂದು ಸುವರ್ಣವಕಾಶ,  ಇದನ್ನು ಸದುಪಯೋಗ ಪಡಿಸಿಕೊಳ್ಳಿ, ನಮ್ಮ ಜೊತೆ ನಿಲ್ಲಿ, ಚುನಾವಣೆ ಬಂದಾಗ ನಿಮಗೆ ಯಾರು ಬೇಕೋ ಅವರಿಗೆ ಮತ ನೀಡಿ, ಆದರೆ ಈಗ ಈ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ತಿಳಿಸಿದ್ದಾರೆ. 
ರೈತರ ಬಾಳಿಗೆ ನೆಮ್ಮದಿ ತರುವ ಕೆಲಸ ಮಾಡಲು ನನಗೊಂದು ಸುವರ್ಣ ಅವಕಾಶ ಸಿಕ್ಕಿದೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ನನಗೂ ರಾಜಕೀಯ ಮಾಡಲು ಗೊತ್ತಿದೆ’ ಎಂದು ಅವರು ಬಿಜೆಪಿಗೆ ತಿರುಗೇಟು ನೀಡಿದರು.