ನನಗೇನು ಚಡ್ಡಿ ವಿಚಾರ ಬೇಕಿಲ್ಲ, ಯಾರೂ ಬೇಕಾದರೂ ಚಡ್ಡಿ ಬಿಚ್ಚಿಕೊಳ್ಳಲಿ : ಕುಮಾರಸ್ವಾಮಿ – Vishwanews24

Featured, ರಾಜ್ಯ ನ್ಯೂಸ್

ಯಾರು ಯಾರು ಕಿತ್ತಾಡಿಕೊಂಡು ಚಡ್ಡಿ ಬಿಚ್ಚಿಕೊಳ್ಳುತ್ತಾರೋ ನನಗೆ ಗೊತ್ತಿಲ್ಲ.

ನನಗೆ ಚಡ್ಡಿ ರಾಜಕಾರಣ ಬೇಕಾಗಿಲ್ಲ..

ಜನರಿಗೆ ಮಾತ್ರ ಚಡ್ಡಿ ತೊಡಿಸುವ ದುಸ್ಸಾಹಸ ಸರಕಾರ ಮಾಡದಿದ್ದರೆ ಸಾಕು..

ಕಲಬುರಗಿ: ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಏನು ಉಳಿದುಕೊಂಡಿಲ್ಲ. ಬರೀ ಜಾತಿ ವಿವಾದಗಳು, ಹಗರಣಗಳೇ ಪ್ರಮುಖವಾಗಿವೆ. “ನನಗೇನು ಚಡ್ಡಿ ವಿಚಾರ ಬೇಕಿಲ್ಲ” ಯಾರೂ ಬೇಕಾದರೂ ಚಡ್ಡಿ ಬಿಚ್ಚಿಕೊಳ್ಳಲಿ. ಆದರೆ, ಜನರಿಗೆ ಮಾತ್ರ ಚಡ್ಡಿ ತೊಡಿಸುವ ದುಸ್ಸಾಹಸ ಸರಕಾರ ಮಾಡದಿದ್ದರೆ ಸಾಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸಂಘ-ಪರವಾರದ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.

ನಗರದ ಮಣ್ಣೂರು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೋಮವಾರ ಪತ್ರಕರ್ತರ ಆರೋಗ್ಯ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. “ಯಾರು ಯಾರು ಕಿತ್ತಾಡಿಕೊಂಡು ಚಡ್ಡಿ ಬಿಚ್ಚಿಕೊಳ್ಳುತ್ತಾರೋ ನನಗೆ ಗೊತ್ತಿಲ್ಲ. ನನಗೆ ಚಡ್ಡಿ ರಾಜಕಾರಣ ಬೇಕಾಗಿಲ್ಲ” ಎಂದು ಛೇಡಿಸಿದರು.

ಈಗ ನಾನೇನು ಮಾತನಾಡುವುದಿಲ್ಲ. ರಾಜ್ಯ ಸಭೆಯ ಚುನಾವಣೆಗಳ ಬಳಿಕ ಮಾತನಾಡುತ್ತೇನೆ. ಸದ್ಯಕ್ಕೆ ಮೂರು ಪಕ್ಷಗಳಲ್ಲಿ ತಮ್ಮದೇ ಆಗಿರುವ ತಂತ್ರಗಳಿವೆ. ಲೆಕ್ಕಾಚಾರಗಳಿವೆ. ಬಹುತೇಕ ಅಡ್ಡ ಮತದಾನ ಸಾಧ್ಯವಾಗಲಿದೆ ಎನ್ನುವ ಲೆಕ್ಕಾಚಾರವೇ ಇಂದಿನ ದಿನಗಳ ಚರ್ಚೆಯೂ ಆಗಿದೆ. ಆದ್ದರಿಂದ ಈಗಲೇ ಏನೂ ಮಾತನಾಡುವಂತಿಲ್ಲ ಎಂದರು.

ಕಾರ್ಕಳ: ರಸ್ತೆಗೆ ನಾಥೂರಾಮ್ ಗೋಡ್ಸೆ ಹೆಸರು ; ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ – Vishwanews24

 

Leave a Reply