ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ ಹಾಗೂ ಇಡೀ ಬಿಜೆಪಿ ನಾಯಕರು ಹೊಣೆ : ಮಹೇಶ್‌ ಶೆಟ್ಟಿ ತಿಮರೋಡಿ – vishwanews24

Featured, ದಕ್ಷಿಣ ಕನ್ನಡ

ಸೌಜನ್ಯಳಿಗೆ ನ್ಯಾಯ ಸಿಗಬೇಕು, ಅತ್ಯಾಚಾರಿಗಳ ಬಂಧನವಾಗಬೇಕು ಎಸ್‌ಐಟಿ ತನಿಖೆ ಮುಂದುವರಿಸಬೇಕು ಎಂದು ಆಗ್ರಹ

ಮಂಗಳೂರು: ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ ಹಾಗೂ ಇಡೀ ಬಿಜೆಪಿ ನಾಯಕರು ಹೊಣೆ ಎಂದು ಸಾಮಾಜಿಕ ಕಾರ್ಯಕರ್ಯ ಮಹೇಶ್‌ ಶೆಟ್ಟಿ ತಿಮರೋಡಿ ಹೇಳಿದ್ದಾರೆ.

ಬಿ. ಎಲ್‌ ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದ ಬಳಿಕ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದರು.

ನಮ್ಮ ಉದ್ದೇಶ ಏನಿದ್ದರೂ ಸೌಜನ್ಯಗೆ ನ್ಯಾಯ ಸಿಗಬೇಕು. ಈ ಹೋರಾಟ ಮುಂದುವರಿಯಬೇಕು. ಅತ್ಯಾಚಾರಿಗಳ ಬಂಧನ ಆಗಬೇಕು. ಎಸ್‌ಐಟಿ ತನಿಖೆ ಮುಂದುವರಿಸಬೇಕು ಎಂದು ಆಗ್ರಹಿಸಿದರಲ್ಲದೇ ಬಿಜೆಪಿಯವರ ಪಾಪದ ಕೂಸು ಸರ್ವನಾಶ ಆಗುತ್ತೆ ಎಂದು ನುಡಿದರು.

ಅಲ್ಲದೇ ನಾನೀಗ ಪೊಲೀಸ್‌ ಠಾಣೆಗೆ ಹೋಗ್ತೀನಿ, ಪೊಲೀಸರಿಗೆ ಸರಿಯಾದ ಮಾಹಿತಿ ಕೊಡ್ತೀನಿ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಬೆಂಬಲಿಗರು ʻಜಸ್ಟೀಸ್‌ ಫಾರ್‌ ಸೌಜನ್ಯʼ ಎಂದು ಘೋಷಣೆ ಕೂಗಿ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದರು.

Leave a Reply