ನನ್ನ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿದ್ರೆ ಹುಷಾರ್: ಸಿದ್ದರಾಮಯ್ಯಗೆ ಎಚ್ಡಿಕೆ ಎಚ್ಚರಿಕೆ -Vishwanews24
ನನ್ನ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿದ್ರೆ ಹುಷಾರ್: ಸಿದ್ದರಾಮಯ್ಯಗೆ ಎಚ್ಡಿಕೆ ಎಚ್ಚರಿಕೆ -Vishwanews24
ಕೋಲಾರ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರೇ ನೀವೇನು ಮಹಾನ್ ಹರಿಶ್ಚಂದ್ರರಾ, ಪಕ್ಷದ ಬಗ್ಗೆ, ನನ್ನ ಬಗ್ಗೆ ಲಘುವಾಗಿ ಮಾತನಾಡಿದರೆ ಹುಷಾರ್ ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ಮೂರು ತಾಲೂಕುಗಳಲ್ಲಿ ದಿನಸಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಅವರು, “ರಾಜಕೀಯ ಮಾಡುವುದನ್ನು ಸಿದ್ದರಾಮಯ್ಯ ಅವರಿಂದ ನಾನು ಕಲಿಯಬೇಕಿಲ್ಲ. 2008ರ ಚುನಾವಣೆಯಲ್ಲಿ ನೀವೇ ಯಡಿಯೂರಪ್ಪ ಅವರ ಬಳಿ ಹಣ ಪಡೆದಿದ್ದೀರಿ. ಇದೇ ನಿಮ್ಮ ಜಾಯಮಾನ, ಯಾವ ಸಂದರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿದ್ದೀರಿ ತಿಳಿದಿದೆ. ಬೆಂಗಳೂರು ನಗರದಲ್ಲಿ 400 ಎಕರೆ ರೀಡೋ ಮಾಡಿದಿರಿ, ಕೆಂಪಣ್ಣ ಆಯೋಗ ವರದಿ ಮಾಡಿದಿರಲ್ಲ ಏನಾಯ್ತು? ನನ್ನ ಪಕ್ಷವನ್ನು ದುಡ್ಡಿಗಾಗಿ ಅಡಮಾನ ಇಟ್ಟಿಲ್ಲ, ಜೆಡಿಎಸ್ ಹಣಕ್ಕಾಗಿ ಎಲ್ಲೂ ಅಡ ಇಟ್ಟಿಲ್ಲ, ಜನರ ಒಳಿತಿಗಾಗಿ ಇರುವ ಪಕ್ಷದ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಗುಡುಗಿದರು.
